ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪಂಜಾಬ್, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಫಲಿತಾಂಶದಲ್ಲಿ ಮುಂಚೂಣಿಯಲ್ಲಿ ಬರುತ್ತದೆ. ಗೋವಾದಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿ ಅಧಿಕಾರಕ್ಕೆ ಏರೋದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದಕ್ಕಾಗಿ ನಮ್ಮ ಪಕ್ಷದ ನಾಯಕರಿಗೆ ಸಹಾಯ ಮಾಡುವ ಸಲುವಾಗಿ ನಾನು ಗೋವಾಕ್ಕೆ ಹೋಗುತ್ತಿದ್ದೇನೆ ಎಂದು ಡಿಕೆಶಿ ಹೇಳಿದ್ದಾರೆ.

ಗೋವಾದಲ್ಲಿ ಫಲಿತಾಂಶ ಪ್ರಕಟಕ್ಕೂ ಮುನ್ನವೇ ಪಕ್ಷಾಂತರ ತಡೆದು ಸರ್ಕಾರ ರಚಿಸಲು ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಲೇ ಗೋವಾಗೆ ತೆರಳುವಂತೆ ಹೈಕಮಾಂಡ್ ಸೂಚನೆ ನೀಡಿದೆ.

2017ರಲ್ಲಿ ಆದಂತೆ ಕಾಂಗ್ರೆಸ್ ಪಕ್ಷದ ಶಾಸಕರು ಪಕ್ಷಾಂತರ ಆಗೋದನ್ನು ತಡೆಯುವ ನಿಟ್ಟಿನಲ್ಲಿ ಈ ಬಾರಿ ಎಐಸಿಸಿ ಫಲಿತಾಂಶಕ್ಕೂ ಮುನ್ನವೇ ಎಚ್ಚೆತ್ತಿದ್ದು, ಹೀಗಾಗಿ ಗೋವಾದಲ್ಲಿ ಸಮಸ್ಯೆ ಉಂಟಾಗದಂತೆ ಪರಿಸ್ಥಿತಿ ನಿಭಾಯಿಸಲು ಕೈ ಹೈಕಮಾಂಡ್ ಡಿಕೆಶಿಗೆ ಟಾಸ್ಕ್ ನೀಡಿದೆ. ಈ ಹಿನ್ನೆಲೆ ಮಂಗಳವಾರ ರಾತ್ರಿ ವಿಶೇಷ ವಿಮಾನದ ಮೂಲಕ ಡಿಕೆಶಿ ಗೋವಾಗೆ ತೆರಳಲಿದ್ದು, ಎರಡು ದಿನಗಳ ಕಾಲ ಗೋವಾದಲ್ಲಿ ಬೀಡು ಬಿಡಲಿದ್ದಾರೆ.

Discover more from Valmiki Mithra

Subscribe now to keep reading and get access to the full archive.

Continue reading