ಬೆಳಗಾವಿ. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸೋಮವಾರ ಬಹಿರಂಗ ಪಡಿಸುವೆ ಎಂದು ಹೇಳಿದ ಶಾಸಕ ರಮೇಶ್ ಜಾರಕಿಹೊಳಿ ಈಗ ಹಿಂದೆ ಸರಿದಿದ್ದಾರೆ.
ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಮುಂದೂಡಿದ್ದು , ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗೋಕಾಕ್ ಕಚೇರಿಯಿಂದ ಮಾಹಿತಿ ಲಭ್ಯವಾಗಿದೆ,
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪೊಲೀಸ್ ತನಿಖೆ ನಡೆಯುತ್ತಿದ್ದು ಪೊಲೀಸ್ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ , ಇಂಥಹ ಸಂದರ್ಭದಲ್ಲಿ ಮಾತನಾಡಿದರೆ ತನಿಖೆ ದಾರಿ ತಪ್ಪಬಹುದು ಎನ್ನುವ ಉದ್ದೇಶದಿಂದ ಪತ್ರಿಕಾಗೋಷ್ಠಿ ಮುಂದೂಡಿರುವುದಾಗಿ ಶಾಸಕರ ಆಪ್ತ ಸಹಾಯಕರು ತಿಳಿಸಿದ್ದಾರೆ