ಕಾಂಗ್ರೆಸ್​ ಶಾಸಕ ಜಮೀರ್​ ಅಹ್ಮದ್ ಗೆ ​ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ..!

ಹುಬ್ಬಳ್ಳಿ: ಕಲ್ಲು ತೂರಾಟ ಹಾಗೂ ಗಲಭೆ ಪ್ರಕರಣದ ಆರೋಪಿಗಳ ಕುಟುಂಬಕ್ಕೆ ಕಾಂಗ್ರೆಸ್​ ಶಾಸಕ ಜಮೀರ್​ ಅಹ್ಮದ್​ ಸಹಾಯ ಹಸ್ತ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ಜಮೀರ್​ ಅಹ್ಮದ್​ಗೆ ಎಚ್ಚರಿಕೆ ನೀಡಿದ್ದಾರೆ. ಒಬ್ಬ ಜನಪ್ರತಿನಿಧಿಯಾಗಿ ಈ ರೀತಿ ದುಡ್ಡು ಕೊಡುವುದು ಎಷ್ಟು ಸರಿ..? ಹುಬ್ಬಳ್ಳಿ ಗಲಭೆಯಲ್ಲಿ ಮಾತ್ರವಲ್ಲ. ಈ ಹಿಂದೆ ಡಿಜೆ-ಕೆಜಿ ಹಳ್ಳಿಯಲ್ಲಿ ಇದೇ ರೀತಿ ಸಹಾಯ ಹಸ್ತ ಮಾಡಿದ್ದರು. ಬಂಧಿತ ಆರೋಪಿತರಿಗೆ ಇವರೆಲ್ಲ ಸಹಾಯ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

Discover more from Valmiki Mithra

Subscribe now to keep reading and get access to the full archive.

Continue reading