ಕೆ.ಆರ್.ಎಸ್ ಪಕ್ಷದಿಂದ ಸಿಂಧನೂರು ತಾಲೂಕು ಘಟಕ ಉದ್ಘಾಟನೆ

ಸಿಂಧನೂರು: ತಾಲೂಕಿನ ಪ್ರವಾಸಿ ಮಂದಿರದಲ್ಲಿ  ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ತಾಲೂಕ ಮಾಸಿಕ ಸಭೆ ನಡೆಯಿತು.

2023 ಸಿಂಧನೂರು ವಿಧಾನ ಸಭಾ ಕ್ಷೇತ್ರದ MLA ಆಭ್ಯರ್ಥಿ ನಿರುಪಾದಿ ಕೆ. ಗೋಮರ್ಸಿ ಮಾತನಾಡಿ ಸಿಂಧನೂರಿನಲ್ಲಿ  ಭ್ರಷ್ಟ ರಾಜಕೀಯ ಪಕ್ಷಗಳ  ಆಡಳಿತ ವ್ಯವಸ್ಥೆಯನ್ನು ಕಿತ್ತೊಗೆದು ರಾಜ್ಯದಲ್ಲಿ  ಸ್ವಚ್ಚ,ಪ್ರಾಮಾಣಿಕ, ಪ್ರಾದೇಶಿಕ, ಜನಪರ ರಾಜಕಾರಣಕ್ಕೆ ಕೆ.ಆರ್.ಎಸ್ ಪಕ್ಷವನ್ನೂ ಬೆಂಬಲಿಸಬೇಕು ಹಾಗೂ ಸಿಂಧನೂರಿನ ಕ್ಷೇತ್ರದ ಜನತೆ ಬರುವ ಚುನಾವಣೆಯಲ್ಲಿ KRS ಪಕ್ಷವನ್ನು ಬೆಂಬಲಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾದ್ಯಕ್ಷ ವೆಂಕಟೇಶ ಮ್ಯಾಕಲದೊಡ್ಡಿ ಅವರು,  ರಾಜ್ಯದಲ್ಲಿ ಭ್ರಷ್ಟಚಾರ  ಮಿತಿ ಮೀರಿದೆ. ಇದರಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರಕ್ಕೆ ಪೈಪೋಟಿಯ ರೀತಿಯಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ ಇದರಿಂದ ಬಡ ಮತ್ತು ಮಧ್ಯಮ ವರ್ಗದ ಜನರು ತೊಂದರೆ ಅನುಭವಿಸುತ್ತಿದ್ದು ಇದನ್ನು ತಪ್ಪಿಸಿ ನೆಮ್ಮದಿಯ ಜೀವನ ನಡೆಸುವಂತಹ ವಾತಾವರಣ ನಿರ್ಮಿಸಲು ಪರ್ಯಾಯ ರಾಜಕಾರಣ ಅಗತ್ಯವಾಗಿದೆ.ಇದರ ಮಹತ್ವ ಜನರಿಗೆ ತಿಳಿಸುವುದೇ KRS ಪಕ್ಷದ ಪ್ರಮುಖ ಉದ್ದೇಶ ಎಂದು ತಿಳಿಸಿದರು.

ತಾಲೂಕು ಅಧ್ಯಕ್ಷ ವೀರಭದ್ರಯ್ಯ ಎಸ್ ಮಾತನಾಡಿ KRS ಪಕ್ಷವು ಕಳೆದ ಅನೇಕ ವರ್ಷಗಳಿಂದ ನಿರಂತರವಾಗಿ ಬ್ರಷ್ಟಚಾರ ,ಅಧಿಕಾರಿಗಳ, ದುರಾಡಳಿತ ವಿರುದ್ಧ ಹಾಗೂ ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸುತ್ತಿದೆ. ಈ ನಿಟ್ಟಿನಲ್ಲಿ ರಾಜಕೀಯ ಕ್ಷೇತ್ರದಲ್ಲಿ ಸುಧಾರಣೆಗೆ ಒತ್ತು ನೀಡಿದ್ದು ಮುಂದಿನ 2023 ರ ವಿಧಾನ ಸಭಾ ಚುನಾವಣೆಗೆ ಮೊದಲ ಹಂತದಲ್ಲಿ 40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು…

ಸಿಂಧನೂರು ತಾಲೂಕಿನ ನೂತನ ಪದಾಧಿಕಾರಿಗಳ ಪಟ್ಟಿ ತಾಲೂಕ ಅದ್ಯಕ್ಷರಾಗಿ ವೀರಭದ್ರಯ್ಶಾ S , ತಾಲೂಕ ಯುವ ಘಟಕದ ಉಪಾಧ್ಯಕ್ಷರಾಗಿ ಸ್ವಾಮಿ ವಿವೇಕಾನಂದ,ತಾಲೂಕ SC/ST ಘಟಕದ ಅಧ್ಯಕ್ಷ ಸಣ್ಣ ಬಸವ ಹಾಗೂ ವೆಂಕಟೇಶ ಜಿ. ಹಾಗೂ ತಾಲೂಕ ಸಂಘಟನಾ ಕಾರ್ಯದರ್ಶಿ ಶರಣಪ್ಪ ,ಹುಸೇನಪ್ಪ ಬಾದರ್ಲಿ ನೇಮಕ ಮಾಡಲಾಗಿದೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಪಿ.ಎಸ್ ಗುರುವಿನಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್. ನಝೀರ್,ಗೌರವಾಧ್ಯಕ್ಷ ಆದಪ್ಪ  ಜಿಲ್ಲಾ ಪದಾಧಿಕಾರಿಗಳು ಹಾಗೂ ಸಿಂಧನೂರು ತಾಲೂಕ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Discover more from Valmiki Mithra

Subscribe now to keep reading and get access to the full archive.

Continue reading