ತುಮಕೂರು : ಆರಕ್ಷಕನಿಂದಲೇ ಮಹಿಳೆ ಮೇಲೆ ಅತ್ಯಾಚಾರ ಯತ್ನ- ಜೈಲು ಪಾಲಾದ ಪೇದೆ

ತುಮಕೂರು : ರಕ್ಷಕರೇ ಭಕ್ಷಕರಾದರೆ ಏನು ಗತಿ, ಹೊಟ್ಟೆ ಪಾಡಿಗಾಗಿ ಹೋಟೆಲ್ ನಡೆಸುತ್ತಿದ್ದ ಮಹಿಳೆಯ ಮೇಲೆ ಪೊಲೀಸ್ ಕಾನ್ಸ್‌ಟೇಬಲ್ ಓರ್ವ ಅತ್ಯಾಚಾರಕ್ಕೆ ಯತ್ನಿಸಿರುವ ಆತಂಕಕಾರಿ ಘಟನೆ ಬುಧವಾರ ಜೂನ್ 29 ಬೆಳಗ್ಗೆ 10 ಗಂಟೆಗೆ ಕಿಬ್ಬನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎಚ್.ಎನ್ . ಮಂಜುನಾಥ್ ( ಮಿಲ್ಟಿ ) ಅತ್ಯಾಚಾರಕ್ಕೆ ಯತ್ನಿಸಿದ ಪೇದೆ, ಈತ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಬಂಧಿಸಲಾಗಿದ್ದು , ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಕಿಬ್ಬನಹಳ್ಳಿ ಪೊಲೀಸರು ಕಳುಹಿಸಿದ್ದಾರೆ.

ಮಂಜುನಾಥ್ ಈ ಹಿಂದೆ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು ಸೈನ್ಯದಲ್ಲಿ ಕೆಲಸ ಬಿಟ್ಟು ಕಾನ್ಸ್‌ಟೇಬಲ್ ಆಗಿದ್ದ , ಸಂತ್ರಸ್ತ ಮಹಿಳೆ ಕಿಬ್ಬನಹಳ್ಳಿಯಲ್ಲಿ ಹೋಟೆಲ್ ನಡೆಸಿಕೊಂಡಿದ್ದಾರೆ . ಬುಧವಾರ ( ಜೂನ್ 29 ) ಬೆಳಗ್ಗೆ ಮಹಿಳೆಯ ಗಂಡ ಹೋಟೆಲ್‌ಗೆ ಪದಾರ್ಥಗಳನ್ನು ತರಲೆಂದು ತಿಪಟೂರಿಗೆ ಹೋಗಿದ್ದರು ಈ ವೇಳೆ ತಿಂಡಿ ತಿನ್ನುವ ನೆಪದಲ್ಲಿ ಹೋಟೆಲ್ ಬಳಿ ಬಂದಿದ್ದ ಆರೋಪಿ ಮಂಜುನಾಥ್ , ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಸಹಕರಿಸದೇ ಹೋದರೆ , ಹೋಟೆಲ್ ಬಂದ್ ಮಾಡಿಸುವುದಾಗಿ ಮಹಿಳೆಗೆ ಬೆದರಿಕೆ ಹಾಕಿದ್ದಾನೆ, ಮಹಿಳೆ ಯಾವುದಕ್ಕೂ ಜಗ್ಗದಿದ್ದಾಗ ಕೊಲೆ ಬೆದರಿಕೆಯನ್ನು ಹಾಕಿದ್ದಾನೆ ಇದಾದ ಕೂಡಲೇ ಮಹಿಳೆ ತನ್ನ ಪತಿಗೆ ಕರೆ ಮಾಡಿ ಎಲ್ಲವನ್ನು ತಿಳಿಸಿದ್ದಾಳೆ, ತಕ್ಷಣ ಕಿಬ್ಬನಹಳ್ಳಿ ಪೊಲೀಸ್ ಠಾಣೆಗೆ ತೆರಳಿ ಸಂತ್ರಸ್ತೆಯ ಪತಿ ದೂರು ದಾಖಲಿಸಿದ್ದಾರೆ .

ಭಾರತೀಯ ದಂಡ ಸಂಹಿತೆ 354 ( ಎ ) , 354 ( ಬಿ ) , 448 , 506 , 509 , ಹಾಗೂ ಎಸ್ ಸಿ , ಎಸ್ ಟಿ ಕಾಯ್ದೆ ಅಡಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದ್ದು ತಕ್ಷಣವೇ ಪೇದೆ ಮಂಜುನಾಥ್‌ನನ್ನು ಬಂಧಿಸಿರುವ ಪೊಲೀಸರು ಆತನನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದ್ದಾರೆ.

Discover more from Valmiki Mithra

Subscribe now to keep reading and get access to the full archive.

Continue reading