ಬಿ.ಪಿ.ಎಲ್. ಕಾರ್ಡ್ ರದ್ದುಗೊಂಡರೆ ಕ್ರಿಮಿನಲ್ ಕೇಸ್… ಸರ್ಕಾರಿ ಸೌಲಭ್ಯಗಳು ಕಟ್….!!!!!

ಪಡಿತರ ಚೀಟಿಗೆ ಅನರ್ಹರಿದ್ದರೂ ಇಲಾಖೆಗೆ ತಪುಪ ಮಾಹಿತಿ ನೀಡಿ ಕಾರ್ಡ್ ಪಡೆದು ಉಚಿತವಾಗಿ ಅಕ್ಕಿ, ಗೋಧಿ, ರಾಗಿ, ಸಕ್ಕರೆ ಮತ್ತು ತಾಳೆ ಎಣ್ಣೆ ಇತರೆ ಪದಾರ್ಥ ಪಡೆದುಕೊಂಡಿದ್ದರು. ಕಾರ್ಡ್

ವಾಪಸ್ ನೀಡದಿದ್ದಲ್ಲಿ ಸರ್ಕಾರವೇ ಪತ್ತೆಹಚ್ಚಿ ಪಡಿತರ ಪಡೆದುಕೊಳ್ಳುತ್ತಿದ್ದ ದಿನದಿಂದ ಈವರೆಗೆ ಎಷ್ಟು ಆಹಾರ ಪದಾರ್ಥಗಳನ್ನು ಪಡೆದಿದ್ದಾರೆ ಎಂಬುದನ್ನು ಲೆಕ್ಕ ಮಾಡಿ ಕೆಜಿಗೆ 35 ರೂ.ನಂತೆ ವಸೂಲಿ ಮಾಡುವುದಲ್ಲದೆ ಕ್ರಿಮಿನಲ್ ಕೇಸ್ ದಾಖಲಿಸಲಿದೆ.

ಬಿಪಿಎಲ್ ಅಥವಾ ಅಂತ್ಯೋದಯ ಕಾರ್ಡ್ ಇದ್ದವರಿಗೆ ಆಯುಷ್ಮಾನ್ ಭಾರತ್-ಕರ್ನಾಟಕ ಯೋಜನೆಯಡಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ವಾರ್ಷಿಕ 5 ಲಕ್ಷ ರೂ. ವರೆಗೆ ಚಿಕಿತ್ಸೆ, ಸರ್ಕಾರದ ವಿವಿಧ ವಸತಿ ಯೋಜನೆಗಳಲ್ಲಿ ಮನೆ ಸೌಲಭ್ಯ, ಗಂಗಾ ಕಲ್ಯಾಣ ಹಾಗೂ ಬಡ್ಡಿರಹಿತ ಸಾಲ ಸೌಲಭ್ಯ ಸೇರಿ ಹಲವು ಯೋಜನೆಗಳು ಸರ್ಕಾರದಿಂದ ದೊರೆಯುತ್ತಿತ್ತು. ಭಾಗ್ಯಲಕ್ಷ್ಮೀ ಯೋಜನೆ, ಸ್ವಯಂ ಉದ್ಯೋಗ, ಶ್ರಮಶಕ್ತಿ, ಅರಿವು ಸಾಲ, ಕಿರುಸಾಲ, ಕೃಷಿ ಯಂತ್ರೋಪಕರಣ ಖರೀದಿ, ಪಶು ಸಂಗೋಪನಾ, ಟ್ಯಾಕ್ಸಿ ಮತ್ತು ಗೂಡ್ಸ್ ವಾಹನ ಖರೀದಿ ಸೇರಿ ಸರ್ಕಾರಿ ಕಲ್ಯಾಣ ಯೋಜನೆಯ ಸೌಲಭ್ಯ ಸಿಗುತ್ತಿದ್ದವು.
ಆರ್ಥಿಕ ಸಬಲರಿದ್ದರೂ ಖೊಟ್ಟಿ ದಾಖಲೆ ಸಲ್ಲಿಸಿ ಬಿಪಿಎಲ್ ಕಾರ್ಡ್ ಪಡೆದು ಆರ್​ಟಿಇ ಅನ್ವಯ ಉಚಿತ ಸೀಟ್ ಪಡೆದುಕೊಂಡವರ ಸಂಖ್ಯೆ ದೊಡ್ಡದಿದೆ.

ಈ ಮೂಲಕ ಕಾರ್ಡ್​ನಿಂದ ಸಿಗುತ್ತಿದ್ದ ಸರ್ಕಾರಿ ಮನೆ ಸೌಲಭ್ಯ, ಉಚಿತ ಆರೋಗ್ಯ ಸೇವೆ, ಆರ್​ಟಿಇ ಸೀಟು ಇನ್ನಿತರ ಸರ್ಕಾರಿ ಸೌಲಭ್ಯಗಳು ಸ್ಥಗಿತಗೊಳ್ಳಲಿವೆ.

Discover more from Valmiki Mithra

Subscribe now to keep reading and get access to the full archive.

Continue reading