ಬೆಳಗಾವಿ: ದೇಶದಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನ ತಿರಸ್ಕರಿಸಿದ್ದಾರೆ. ಈಗಲೂ ಅವರಿಗೆ ಬುದ್ದಿ ಬಂದಿಲ್ಲ ಅಂದ್ರೆ ಜನರೇ ತಿರ್ಮಾನ ಮಾಡುತ್ತಾರೆ ಎಂದು ಸಚಿವ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಸವಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿಜೀ ಸೇರಿದಂತೆ ಇನ್ನೂ ಹಲವು ರಾಷ್ಟ್ರೀಯ ನಾಯಕರ ಭಾವಚಿತ್ರಗಳನ್ನ ಹಾಕುತ್ತೇವೆ. ಬಸವಣ್ಣನವರ ಫೋಟೋ ಹಾಕುವ ಬಗ್ಗೆ ನಾವು ಕಾಂಗ್ರೆಸ್ ನಿಂದ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು.
ಕಾಂಗ್ರೆಸ್ ನ್ನ ಜನರು ತಿರಸ್ಕಾರ ಮಾಡಿದ್ದಾರೆ. ಹಾಗಾಗಿ ಅವರು ಬೀದಿಗೆ ಬಿದ್ದು, ಹೋರಾಟ ನಡೆಸಿದ್ದಾರೆ. ದೇಶದ ಜನ, ಅವರು ಅಧಿಕಾರ ನಡೆಸಲು ಸಮ್ಮತಿಸುವುದಿಲ್ಲ ಎಂದು ಗೋವಿಂದ ಕಾರಜೋಳ ಕಿಡಿಕಾರಿದರು.