ಬೆಳಗಾವಿ: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಇಂದು ವಿಧಾನಪರಿಷತ್ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ , ಸಚಿವರಾದ ಜೆ.ಸಿ. ಮಾಧುಸ್ವಾಮಿ, ಗೋವಿಂದ ಕಾರಜೋಳ, ಸರ್ಕಾರದ ಮುಖ್ಯ ಸಚೇತಕ ವೈ.ಎನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರು ಹಾಜರಿದ್ದರು.
ನಾಳೆ ಮೇಲ್ಮನೆಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಆಡಳಿತಾರೂಢ ಬಿಜೆಪಿ ಸದಸ್ಯರು ಬಹುಮತ ಹೊಂದಿರುವುದರಿಂದ ಬಸವರಾಜ ಹೊರಟ್ಟಿ ಆಯ್ಕೆ ಬಹುತೇಕ ಖಚಿತವಾಗಿದೆ.