ಬೆಳಗಾವಿ: ಕೃಷಿಯನ್ನು ನಂಬಿರುವ ಒಕ್ಕಲಿಗ ಸಮುದಾಯಕ್ಕೂ ಮೀಸಲಾತಿ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾ ಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ನಾವು ಬೇರೆ ಸಮುದಾಯದವರಿಗೆ ಮೀಸಲಾತಿ ಕೊಡಬೇಡಿ ಎಂದು ಹೇಳುವುದಿಲ್ಲ. ಇತರೆ ಸಮುದಾಯದಂತೆ ನಮಗೂ ಕೂಡ ಸಂವಿಧಾನಬದ್ದವಾದ ಮೀಸಲಾತಿ ಕೊಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸಮುದಾಯದ ಪರವಾಗಿ ಮನವಿ ಮಾಡುವುದಾಗಿ ತಿಳಿಸಿದರು.
ಈಗಾಗಲೇ ಹಿಂದೆ ನಮ್ಮ ಸಮುದಾಯದ ನಿರ್ಮಲಾನಂದ ಶ್ರೀಗಳು, ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ ಸೇರಿದಂತೆ ಸಮುದಾಯದ ಮುಖಂಡರೆಲ್ಲರೂ ಸಭೆ ಸೇರಿ ನಮಗೆ ಮನವಿ ಮಾಡಿದ್ದಾರೆ. ಈ ಮನವಿಯನ್ನು ಮುಖ್ಯಮಂತ್ರಿಗೆ ಈಗಾಗಲೇ ಹಸ್ತಾಂತರ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಎಂದರು.