ಮಂಡ್ಯ: ಮೆಗಾ ಡೈರಿ ಸ್ಥಾಪನೆ ಪುಣ್ಯದ ಕೆಲಸ ಇದರಿಂದ ರೈತ ಕುಟುಂಬಕ್ಕೆ ಶಕ್ತಿ ತುಂಬಬಹುದು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಹೇಳಿದರು.
ಅವರು ಗೆಜ್ಜಲಗೆರೆಯಲ್ಲಿ 260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೆಗಾ ಡೇರಿ ಉದ್ಘಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ರಂತೆ ಅಮಿತ್ ಶಾ ಅವರು ಧೃಡ ನಿರ್ಧಾರ ಕೈಗೊಳ್ಳುವ ಗುಣದಿಂದಲೇ ಖ್ಯಾತ ರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.