Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-includes/feed-rss2.php on line 8
basavaraj bommai bjp Archives - Valmiki Mithra https://valmikimithra.com/archives/tag/basavaraj-bommai-bjp News Paper Fri, 09 Dec 2022 10:11:59 +0000 en-US hourly 1 https://wordpress.org/?v=6.8.1 https://i0.wp.com/valmikimithra.com/wp-content/uploads/2021/07/cropped-WhatsApp-Image-2021-07-16-at-11.33.21-1.jpeg?fit=32%2C32&ssl=1 basavaraj bommai bjp Archives - Valmiki Mithra https://valmikimithra.com/archives/tag/basavaraj-bommai-bjp 32 32 207262515 ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ https://valmikimithra.com/archives/6501 Fri, 09 Dec 2022 10:11:59 +0000 https://valmikimithra.com/?p=6501 ತುಮಕೂರು: ವೈದ್ಯಕೀಯ ಕ್ಷೇತ್ರದ ಎಲ್ಲರೂ ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು. ಅವರು ಇಂದು ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ದೇವಾಲಯ- ಉಚಿತ

The post ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
ತುಮಕೂರು: ವೈದ್ಯಕೀಯ ಕ್ಷೇತ್ರದ ಎಲ್ಲರೂ ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು. ಅವರು ಇಂದು ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ದೇವಾಲಯ- ಉಚಿತ ನೇತ್ರ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

ನಾರಾಯಣ‌ ನೇತ್ರಾಲಯ ಒಂದು ಹೆಜ್ಜೆ ಮುಂದೆ ಹೋಗಿ ಉಚಿತ‌ ಚಿಕಿತ್ಸೆ ನೀಡುತ್ತಿದ್ದಾರೆ. ಇದಕ್ಕಿಂತ ಉದಾಹರಣೆ ಮತ್ತೊಂದಿಲ್ಲ. ಡಾ: ಭುಜಂಗ ಶೆಟ್ಟಿಯವರು ತಮ್ಮ ವೃತ್ತಿ ಯಲ್ಲಿ ಯಶಸ್ವಿಯಾಗಿದ್ದಾರೆ. ಯಶಸ್ಸು ಪಡೆದವರೆಲ್ಲಾ ಬದುಕಿನಲ್ಲಿ ಸಮಾಜಕ್ಕೆ ಹಿಂತಿರುಗಿಸಿ ನೀಡಬೇಕೆಂಬ ಸಣ್ಣ ಗುಣಧರ್ಮವಿದ್ದರೆ , ಈ ಜಗತ್ತು ಇನ್ನಷ್ಟು ಉತ್ತಮವಾಗುತ್ತದೆ. ಎಲ್ಲರಿಗೂ ಶ್ರೀಮಂತಿಕೆನಿರುವುದಿಲ್ಲ. ಅಂತಿಮವಾಗಿ ನಮ್ಮ ದುಡಿಮೆ, ಶ್ರೀಮಂತಿಕೆ ಸೃಷ್ಟಿಗೆ ಸೇರಿದ್ದು. ನಾವು ಸೃಷ್ಟಿಯ ಭಾಗವಷ್ಟೇ.ಭುಜಂಗಶೆಟ್ಟಿ ಯವರಿಗೆ ನಾನು ಎನ್ನುವ ಭಾವವಿಲ್ಲ. ಕೃತಿಯಲ್ಲಿ ಮಾಡುವ ದೊಡ್ಡ ಗುಣ ಅವರು ಹಾಗೂ ಅವರ ಕುಟುಂಬದವರಿಗೆ ಇದೆ ಎಂದರು.

ನಮ್ಮ ಸರ್ಕಾರ ಕಣ್ಣಿನ ಚಿಕಿತ್ಸೆಗೆ ಯೋಜನೆ ರೂಪಿಸಿದ್ದೇವೆ. 60 ವರ್ಷ ಮೇಲ್ಪಟ್ಟವರಿಗೆ ಕಣ್ಣಿನ ತಪಾಸಣೆ, ಚಿಕಿತ್ಸೆ, ಉಚಿತ ಕನ್ನಡಕ ನೀಡುವ ಯೋಜನೆ ಜನವರಿಯಲ್ಲಿ ಉದ್ಘಾಟನೆಗೊಳ್ಳಲಿದೆ. ಈ ಯೋಜನೆಗೆ ಡಾ.‌ಭುಜಂಗಶೆಟ್ಟಿ ಅವರು ಮೆಂಟರ್ ಆಗಿ ಬರಬೇಕು. ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಈ ಯೋಜನೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಯಾಗಿದೆ.

ಕಿವಿಯ ಸಮಸ್ಯೆಗೆ ಕಾಕ್ಲಿಯರ್ ಇಂಪ್ಲಾಂಟ್ ಮಾಡುವ ಯೋಜನೆ 500 ಕೋಟಿ ರೂ.ಗಳ ಯೋಜನೆ ರೂಪಿಸಿದ್ದೇವೆ. ನಮ್ಮ ಸರ್ಕಾರ ಅತ್ಯಂತ ಸೂಕ್ಷ್ಮ ವಿಚಾರಗಳ‌ ಕಡೆಗೆ ಹೆಚ್ಚಿನ ಗಮನ ನೀಡಿದ್ದೇವೆ.ಡಯಾಲಿಸಿಸ್ ಸೈಕಲ್ ನ್ನು 30 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಿಸಲಾಗಿದೆ. ಕ್ಯಾನ್ಸರ್ ಚಿಕಿತ್ಸೆಗೆ 12 ಹೊಸ ಕೇಂದ್ರಗಳನ್ನು ತೆರೆದು ಕೀಮೋಥೆರಪಿ ಸೈಕಲ್ ಗಳನ್ನು ದುಪ್ಪಟ್ಟು ಮಾಡಲಾಗಿದೆ. ಸಾಮಾನ್ಯ ಆರೋಗ್ಯ ತಪಾಸಣೆಯನ್ನು ಪ್ರರಿ ತಾಲ್ಲೂಕು ಹಾಗೂ ಜಿಲ್ಲೆಗಳಲ್ಲಿ ಕೈಗೊಳ್ಳಲು ಆದೇಶ ಹೊರಡಿಸಿದೆ. 100 ಪಿ.ಹೆಚ್.ಸಿ ಕೇಂದ್ರಗಳನ್ನು ಸಿ.ಹೆಚ್.ಸಿ ಕೇಂದ್ರಗಳಾಗಿ ತಲಾ 10.ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗಿದೆ. ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ಹಾಗೂ ರೋಗಿಗಳಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂದರು.

ಜಗತ್ತಿನಲ್ಲಿ ಅತಿ ಹೆಚ್ಚು ಕಣ್ಣಿನ ರೋಗ, ಕುರುಡುತ ಮಕ್ಕಳಿಗೆ ಬರುವುದು ಅಪೌಷ್ಟಿಕತೆಯಿಂದ. ಆದ್ದರಿಂದ ನಮ್ಮ ಸರ್ಕಾರ ಅಪೌಷ್ಟಿಕತೆ ನಿವಾರಣೆಗೆ ವಿಶೇಷ ಆಹಾರ ಹಾಗೂ ಔಷಧ ನೀಡುವ ಯೋಜನೆ ರೂಪಿಸಿದ್ದೇವೆ. ಅಪೌಷ್ಟಿಕತೆಯಿಂದಾಗುವ ಕಣ್ಣಿನ ತೊಂದರೆ ನಿವಾರಣೆಗೆ ವಿಶೇಷ ಕಾರ್ಯಕ್ರಮ ಪ್ರಾರಂಭವಾಗಿದೆ. ಆರು ಜಿಲ್ಲೆಗಳಲ್ಲಿ ಅಪೌಷ್ಟಿಕತೆ ಹೆಚ್ಚಿರುವ ಅದರ ನಿವಾರಣೆಗೆ ವಿಶೇಷ ಯೋಜನೆ ರೂಪಿಸಲಾಗಿದೆ.ಕೋವಿಡ್ ನ್ನು ಅತ್ಯಂತ ಯಶಸ್ವಿಯಾಗಿ ನಮ್ಮ ಸರ್ಕಾರ ನಿಭಾಯಿಸಿದೆ. ಸಿದ್ದಗಂಗಾ ಸ್ವಾಮೀಜಿ ಗಳು ಆಸ್ಪತ್ರೆಗೆ ಸ್ಥಳ ನೀಡಿ ಆಶೀರ್ವಾದ ಮಾಡಿದ್ದಾರೆ ಎಂದರು.

*ಪರೋಪಕಾರಿ ಗುಣ*
ಡಾ ಭುಜಂಗ ಶೆಟ್ಟಿಯವರು ರಾಜ್ಯದ ಎಲ್ಲ‌ ಜಿಲ್ಲೆಗಳಲ್ಲಿ ಉಚಿತ ಆಸ್ಪತ್ರೆ ತೆರೆಯುವುದಾಗಿ ಹೇಳಿದ್ದಾರೆ‌. ಕರ್ನಾಟಕ ಆರೋಗ್ಯ ಕರ್ನಾಟಕ ವಾಗಲಿ. ದೇವರು ಆ ಶಕ್ತಿ ನೀಡಲಿ. ಅಂಧರ ಬಾಳಿಗೆ ಇದು ಜ್ಯೋತಿಯಾಗಿ ಬೆಳಗಲಿ ಎಂದರು.
ಮಾನವ ದೇಹದಲ್ಲಿ ಹೃದಯದ ನಂತರ ಕಣ್ಣು. ಕಣ್ಣಿನಿಂದ‌ ಕೇವಲ ನೋಟವಷ್ಟೆ ಅಲ್ಲ, ಜ್ಞಾನವೂ ಪ್ರಾಪ್ತಿ ಯಾಗುತ್ತದೆ. ಕಣ್ಣಿಲ್ಲದಿದ್ದರೆ ಶಿಕ್ಷಣ, ಸಾಹಿತ್ಯ ಇರುತ್ತಿರಲಿಲ್ಲ. ಇವೆರಡೂ ಇರದಿದ್ದರೆ ಸುಸಂಸ್ಕೃತ ಸಮಾಜದ ನಿರ್ಮಾಣವೂ ಆಗುತ್ತಿರಲಿಲ್ಲ.

ಕಣ್ಣಿನ ಚಟುವಟಿಕೆಗಳು ಬಹಳ ಸೂಕ್ಷ್ಮ. ವಯಸ್ಸಾದಂತೆ ಕಣ್ಣು ಗಳಿಗೆ ಆಗುವ ತೊಂದರೆಯಿಂದ ಹಿಡಿದು ಹಲವಾರು ಸಂದರ್ಭಗಳಲ್ಲಿ ಕಣ್ಣಿಗೆ ಬರುವ ಆಪತ್ತುಗಳ ನಿವಾರಣೆ ಮಾಡುವ ತಂತ್ರಜ್ಞಾನ ಜಗತ್ತಿನಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆದಿದೆ.
ರಾಜ್ಯದಲ್ಲಿ ಡಾ. ಭುಜಂಗಶೆಟ್ಟಿ ಅವರು 25 ವರ್ಷಗಳಿಗೂ ಹೆಚ್ಚು ಕಣ್ಣಿನ ರೋಗಗಳ ನಿವಾರಣೆಗೆ ಬಹಳ ದೊಡ್ಡ ಸೇವೆ ಮಾಡುತ್ತಿದ್ದಾರೆ. ಕಣ್ಣಿನ ದಾನ ಮಾಡುವ ಬಗ್ಗೆ ದೊಡ್ಡ ಅಭಿಯಾನ ಮಾಡಿದವರು ಅವರು, ಡಾ. ರಾಜಕುಮಾರ್ ಅವರಿಂದ ಹಿಡಿದು ಪುನೀತ್ ರಾಜ್ ಕುಮಾರ್ ವರೆಗೂ ಕಣ್ಣಿನ ದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಅಭಿನಂದಿಸಿದರು.

*ಸಂಪೂರ್ಣ ಉಚಿತ ಕಣ್ಣಿನ ಆಸ್ಪತ್ರೆ*
ಇದು ಸಂಪೂರ್ಣ ಉಚಿತ ಆಸ್ಪತ್ರೆ ಇಲ್ಲಿ ಕ್ಯಾಶ್ ಕೌಂಟರ್ ಇರುವುದಿಲ್ಲ ಎಂದು ತಿಳಿದಾಗ ಇದು ಹೇಗೆ ಸಾಧ್ಯ ಎಂದು ಆಶ್ಚರ್ಯವಾಯಿತು. ಶೇ 100 ರಷ್ಟು ಅವರ ದುಡಿಮೆಯಿಂದ ಪುಣ್ಯದ ಕಾರ್ಯವಾಗಿ ಈ ಕೆಲಸ ಮಾಡುತ್ತಿರುವುದು ತಿಳಿದು ಹೃದಯ ತುಂಬಿ ಬಂದಿತು. ಈ ರೀತಿಯ ಆಸ್ಪತ್ರೆ ರಾಜ್ಯದಲ್ಲಿ ಎಲ್ಲಿಯೂ ಇಲ್ಲ. ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಮಾಡುತ್ತಾರೆ. ಆದರೆ ಎಲ್ಲಾ ರೀತಿಯ ಆಧುನಿಕ ವ್ಯವಸ್ಥೆಯನ್ನು ಒಳಗೊಂಡ ಆಸ್ಪತ್ರೆ ಇದಾಗಿದೆ‌. ಬಡವರಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಬೇಕೆನ್ನುವ ತೀರ್ಮಾನ ಮಾದರಿಯಾಗಿದೆ. ಎಲ್ಲಾ ಯಶಸ್ವಿ ವೈದ್ಯರು ಇದನ್ನು ಅನುಸರಿಸಬೇಕು ಎಂದರು.

ಬಡವರು ಉತ್ತಮ ವೈದ್ಯಕೀಯ ಸೇವೆ ಪಡೆಯಲು ಗಂಭೀರವಾಗಿ ಚಿಂತನೆ ಅಗತ್ಯ*
ವೈದ್ಯರು ಉತ್ತಮ ಸೇವೆಯನ್ನು ಕಡಿಮೆ ದರದಲ್ಲಿ ನೀಡುವ ಕೆಲಸ ಮಾಡಬೇಕು. ವೈದ್ಯಕೀಯ ಸೇವೆ ಅತ್ಯಂತ ದುಬಾರಿಯಾಗಿದೆ. ದೊಡ್ಡ ಪ್ರಮಾಣದ ಹಣ ಅಗತ್ಯವಿದೆ. ಬಡವರು ಉತ್ತಮ ವೈದ್ಯಕೀಯ ಸೇವೆ ಪಡೆಯಲು ಸಾಧ್ಯವಾಗದಂತಾಗಿದೆ. ಈ ಬಗ್ಗೆ ನಾವು ಗಂಭೀರವಾಗಿ ಚಿಂತನೆ. ಮಾಡಬೇಕಿದೆ. ನಮ್ಮ ಬಂಧುಗಳಿಗೆ ಆರ್ಥಿಕ ವ್ಯವಸ್ಥೆ ಇಲ್ಲದ ಕಾರಣ ರೋಗದಿಂದ ನರಳಿ ಸಾವನಪ್ಪುವುದನ್ನು ನೋಡಿ ಸುಮ್ಮನಿರಲು ಸಾಧ್ಯವಿಲ್ಲ.
ಇಡೀ ರಾಜ್ಯ ಹಾಗೂ ರಾಷ್ಟ್ರದಲ್ಲಿ ಚಿಂತನೆಯಾಗಬೇಕು. ಔಷಧಗಳ ಆರ್. ಅಂಡ್ ಡಿ ಯಿಂದ ಹಿಡಿದು, ಪರಿಕರಗಳ ಉತ್ಪಾದನೆ ಹಾಗೂ ವೈದ್ಯರು ಕೂಡ ಈ ಬಗ್ಗೆ ಚಿಂತನೆ ಮಾಡಬೇಕು ಎಂದರು.

*ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ದೊರೆಯಬೇಕು*
ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ನಮ್ಮ ಪ್ರಧಾನ ಮಂತ್ರಿ ಅವರು ಆಯುಷ್ಮಾನ್ ಭಾರತ ಯೋಜನೆಯಡಿ 5 ಲಕ್ಷ ರೂವರೆಗೂ ಬಡವರ ಚಿಕಿತ್ಸೆಗಾಗಿ ಜಾರಿಗೊಳಿಸಿದ್ದಾರೆ. ರಾಜ್ಯ ದಲ್ಲಿ 5 ಕೋಟಿ ಕಾರ್ಡುಗಳನ್ನು ನೀಡುವ ಗುರಿ ಇದ್ದು, ಈಗಾಗಲೇ ಒಂದು ಕೋಟಿ ಕಾರ್ಡ್ ನೀಡಿದ್ದೇವೆ. ಇದೊಂದು ಕಡೆಯಾದರೆ, ಸಾಮಾನ್ಯ ಜನರಿಗೆ ಯಾವುದೇ ತೊಂದರೆ ಇಲ್ಲದೆ ನೇರವಾಗಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಬೇಕಾದರೆ ಅವರಿಗೆ ಸುಲಭ ದರದಲ್ಲಿ ಚಿಕಿತ್ಸೆ ದೊರೆಯುವುದು ಮುಖ್ಯ ಎಂದರು.

ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸಚಿವರಾದ ಬಿ.ಸಿ.ನಾಗೇಶ್, ಗೋವಿಂದ ಕಾರಜೋಳ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ: ಸಿ.ಸೋಮಶೇಖರ್, ನಾರಾಯಣ ನೇತ್ರಾಲಯ ಆಸ್ಪತ್ರೆಯ ಹಿರಿಯ ವೈದ್ಯ ಡಾ: ಭುಜಂಗಶೆಟ್ಟಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

The post ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
6501
ಬಸವರಾಜ್ ಬೊಯ್ಮಾಯಿಗೆ ‘ಬೊಮ್ಮಾಯುಲ್ಲಾ ಖಾನ್’ ಎನ್ನಬಹುದೇ!!! https://valmikimithra.com/archives/6498 Fri, 09 Dec 2022 09:24:03 +0000 https://valmikimithra.com/?p=6498 ಬೆಂಗಳೂರು: ಬಿಜೆಪಿಯ ಖಾನ್ ರಾಜಕೀಯಕ್ಕೆ ಪೋಟೋ ಸಮೇತ ಟಾಂಗ್ ನೀಡಿದ ಕಾಂಗ್ರೆಸ್ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾಖಾನ್ ಎಂದಿದ್ದ ಬಿಜೆಪಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತಿರುಗೇಟು ನೀಡಿದೆ. ವಿರೋಧ

The post ಬಸವರಾಜ್ ಬೊಯ್ಮಾಯಿಗೆ ‘ಬೊಮ್ಮಾಯುಲ್ಲಾ ಖಾನ್’ ಎನ್ನಬಹುದೇ!!! appeared first on Valmiki Mithra.

]]>
ಬೆಂಗಳೂರು: ಬಿಜೆಪಿಯ ಖಾನ್ ರಾಜಕೀಯಕ್ಕೆ ಪೋಟೋ ಸಮೇತ ಟಾಂಗ್ ನೀಡಿದ ಕಾಂಗ್ರೆಸ್ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾಖಾನ್ ಎಂದಿದ್ದ ಬಿಜೆಪಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತಿರುಗೇಟು ನೀಡಿದೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾ ಖಾನ್ ಎಂದಿದ್ದ ಬಿಜೆಪಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತಿರುಗೇಟು ನೀಡಿದೆ.

ಮುಖ್ಯಮಂತ್ರಿ ಸೇರಿದಂತೆ ಬಿಜೆಪಿ ನಾಯಕರ ಹೆಸರು ಪ್ರಸ್ತಾಪಿಸಿ ಟಾಂಗ್ ಕೊಟ್ಟಿದೆ.ಬಿಜೆಪಿ ಸರಣಿ ಟ್ವಿಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್‌, ನಿಮ್ಮ ಹಲವು ನಾಯಕರಿಗೆ ಈ ಹೆಸರಿಂದ ಕರೆಯಬಹುದೇ? ಎಂದು ಪ್ರಶ್ನಿಸಿದೆ.

The post ಬಸವರಾಜ್ ಬೊಯ್ಮಾಯಿಗೆ ‘ಬೊಮ್ಮಾಯುಲ್ಲಾ ಖಾನ್’ ಎನ್ನಬಹುದೇ!!! appeared first on Valmiki Mithra.

]]>
6498
ಎರಡು ದಿನಗಳ ನವದೆಹಲಿ ಪ್ರವಾಸ- ಬೊಮ್ಮಾಯಿ ಅವರು ಹಿಂತಿರುಗಿದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿ..! https://valmikimithra.com/archives/6305 Thu, 01 Dec 2022 08:17:59 +0000 https://valmikimithra.com/?p=6305 ಬೆಂಗಳೂರು: ಎರಡು ದಿನಗಳ ನವದೆಹಲಿ ಪ್ರವಾಸ ಮುಗಿಸಿಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂತಿರುಗಿದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಚಿವರಾದ ಡಾ.ಕೆ.ಸುಧಾಕರ್, ಆನಂದ್ ಸಿಂಗ್ ಹಾಗೂ ಸಚಿವ

The post ಎರಡು ದಿನಗಳ ನವದೆಹಲಿ ಪ್ರವಾಸ- ಬೊಮ್ಮಾಯಿ ಅವರು ಹಿಂತಿರುಗಿದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿ..! appeared first on Valmiki Mithra.

]]>
ಬೆಂಗಳೂರು: ಎರಡು ದಿನಗಳ ನವದೆಹಲಿ ಪ್ರವಾಸ ಮುಗಿಸಿಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂತಿರುಗಿದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಸಚಿವರಾದ ಡಾ.ಕೆ.ಸುಧಾಕರ್, ಆನಂದ್ ಸಿಂಗ್ ಹಾಗೂ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿ.ಪಿ.ಯೋಗೇಶ್ವರ್, ಇತ್ತೀಚೆಗಷ್ಟೇ ಪಕ್ಷಕ್ಕೆ ಸೇರ್ಪಡೆಯಾಗಿರುವ ಮಾಜಿ ಸಂಸದ ಮುದ್ದಹನುಮೇಗೌಡ ಮತ್ತಿತರರು ಭೇಟಿಯಾಗಿದ್ದರು.

ಎರಡು ದಿನಗಳ ಕಾಲ ದೆಹಲಿಯಲ್ಲಿ ಇದ್ದ ಸಿಎಂ ಬೊಮ್ಮಾಯಿ ಅವರು, ಕೇಂದ್ರದ ವಿವಿಧ ಇಲಾಖೆಯ ಸಚಿವರನ್ನು ಭೇಟಿಯಾಗಿ ರಾಜ್ಯದ ಯೋಜನೆಗಳ ಅನುಷ್ಠಾನ ಕುರಿತು ಮಾತುಕತೆ ನಡೆಸಿದ್ದರು.

The post ಎರಡು ದಿನಗಳ ನವದೆಹಲಿ ಪ್ರವಾಸ- ಬೊಮ್ಮಾಯಿ ಅವರು ಹಿಂತಿರುಗಿದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿ..! appeared first on Valmiki Mithra.

]]>
6305
2 ದಿನ ಸಿಎಂ ಬಸವರಾಜ ಬೊಮ್ಮಾಯಿ ಚಿತ್ರದುರ್ಗ ಪ್ರವಾಸ..! https://valmikimithra.com/archives/6169 Tue, 22 Nov 2022 06:07:43 +0000 https://valmikimithra.com/?p=6169 ಬೆಂಗಳೂರು: ಬೆಳಗ್ಗೆ 10ಕ್ಕೆ ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 10.45ಕ್ಕೆ ಹಿರಿಯೂರು ತಾಲೂಕಿನ ವಿ.ವಿ.ಪುರ ಮುರಾರ್ಜಿ ದೇಸಾಯಿ ಮಾಡಲ್ ರೆಸಿಡೆನ್ಸಿಯಲ್ ಸ್ಕೂಲ್ ಆವರಣದ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ

The post 2 ದಿನ ಸಿಎಂ ಬಸವರಾಜ ಬೊಮ್ಮಾಯಿ ಚಿತ್ರದುರ್ಗ ಪ್ರವಾಸ..! appeared first on Valmiki Mithra.

]]>
ಬೆಂಗಳೂರು: ಬೆಳಗ್ಗೆ 10ಕ್ಕೆ ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 10.45ಕ್ಕೆ ಹಿರಿಯೂರು ತಾಲೂಕಿನ ವಿ.ವಿ.ಪುರ ಮುರಾರ್ಜಿ ದೇಸಾಯಿ ಮಾಡಲ್ ರೆಸಿಡೆನ್ಸಿಯಲ್ ಸ್ಕೂಲ್ ಆವರಣದ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ.

ಮಧ್ಯಾಹ್ನ 1.45ಕ್ಕೆ ಹಿರಿಯೂರು ತಾಲೂಕು ವಿವಿ ಪುರ ಮುರಾರ್ಜಿ ದೇಸಾಯಿ ಮಾಡಲ್ ರೆಸಿಡೆನ್ಸಿಯಲ್ ಸ್ಕೂಲ್ ಆವರಣದ ಹೆಲಿಪ್ಯಾಡ್‍ನಿಂದ ಚಳ್ಳಕೆರೆ ಸಾಯಿ ಬಾಬಾ ಮಂದಿರ ಹತ್ತಿರದ ಹೆಲಿಪ್ಯಾಡ್‍ಗೆ ತೆರಳಲಿದ್ದಾರೆ.
ನವೆಂಬರ್ 23ರಂದು ಬೆಳಿಗ್ಗೆ 9ಕ್ಕೆ ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ 10ಕ್ಕೆ ಚಿತ್ರದುರ್ಗ ಮುರುಘಾ ಮಠ ಆವರಣದ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ.

ಕಾನೂನು ಕಾಲೇಜಿನ ನೂತನ ಕಟ್ಟಡ ‘ಕಾನೂನು ಸೌಧ’ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11ಕ್ಕೆ ಮುರುಘಾ ಮಠದ ಆವರಣದ ಹೆಲಿಪ್ಯಾಡ್‍ನಿಂದ ಹೆಲಿಕಾಪ್ಟರ್ ಮೂಲಕ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಕ್ರೀಡಾಂಗಣ ಹೆಲಿಪ್ಯಾಡ್‍ಗೆ ತೆರಳಲಿದ್ದಾರೆ

The post 2 ದಿನ ಸಿಎಂ ಬಸವರಾಜ ಬೊಮ್ಮಾಯಿ ಚಿತ್ರದುರ್ಗ ಪ್ರವಾಸ..! appeared first on Valmiki Mithra.

]]>
6169
ಕೇಂದ್ರ ತನಿಖಾ ಸಂಸ್ಥೆಗಳಿಗೆ ಅಗತ್ಯ ಮಾಹಿತಿ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚನೆ..! https://valmikimithra.com/archives/6148 Mon, 21 Nov 2022 09:05:19 +0000 https://valmikimithra.com/?p=6148 ಬೆಂಗಳೂರು: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿ ಬಳಿ ಆಟೋದಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ತನಿಖಾ ಸಂಸ್ಥೆಗಳಿಗೆ ಅಗತ್ಯ ಮಾಹಿತಿ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚಿಸಿದ್ದಾರೆ. ಕೇಂದ್ರ

The post ಕೇಂದ್ರ ತನಿಖಾ ಸಂಸ್ಥೆಗಳಿಗೆ ಅಗತ್ಯ ಮಾಹಿತಿ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚನೆ..! appeared first on Valmiki Mithra.

]]>
ಬೆಂಗಳೂರು: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿ ಬಳಿ ಆಟೋದಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ತನಿಖಾ ಸಂಸ್ಥೆಗಳಿಗೆ ಅಗತ್ಯ ಮಾಹಿತಿ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚಿಸಿದ್ದಾರೆ.

ಕೇಂದ್ರ ತನಿಖಾ ಸಂಸ್ಥೆಗಳಿಗೆ ಮಾಹಿತಿ ಒದಗಿಸಲು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‍ಕುಮಾರ್ ಅವರ ಜೊತೆ ಸಮನ್ವಯ ಸಾಧಿಸಬೇಕು. ಇದೊಂದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಎಚ್ಚರಿಕೆ ಹೆಜ್ಜೆ ಇಡಬೇಕೆಂದು ಸೂದ್ ಅವರಿಗೆ ಸಿಎಂ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಪ್ರತಿಕ್ಷಣದ ಮಾಹಿತಿಯನ್ನು ತಮಗೆ ಒದಗಿಸಬೇಕು. ತನಿಖಾ ಪ್ರಗತಿ ವರದಿ ಯಾವ ಹಂತದಲ್ಲಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರನ ಹಿನ್ನಲೆ, ಈತನ ಹಿಂದೆ ಯಾರಾದರೂ ಉಗ್ರರು ಇದ್ದಾರೆಯೇ? ಯಾವ ಸಂಘಟನೆಗೆ ಸೇರಿದವರು, ಇವರ ಉದ್ದೇಶ ಎಂಬುದರ ಬಗ್ಗೆ ಇಂಚಿಂಚು ಮಾಹಿತಿ ನೀಡಬೇಕೆಂದು ಸೂಚನೆ ನೀಡಿದ್ದಾರೆ.

ಈಗಾಗಲೇ ಮಂಗಳೂರುನಗರ ಪೊಲೀಸ್ ಆಯುಕ್ತರಾದ ಶಶಿಕುಮಾರ್, ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‍ಕುಮಾರ್ ಹಾಗೂ ಶಿವಮೊಗ್ಗ ಮತ್ತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದಲೂ ನಾವು ಮಾಹಿತಿ ಪಡೆದಿದ್ದೇವೆ ಎಂದರು

The post ಕೇಂದ್ರ ತನಿಖಾ ಸಂಸ್ಥೆಗಳಿಗೆ ಅಗತ್ಯ ಮಾಹಿತಿ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚನೆ..! appeared first on Valmiki Mithra.

]]>
6148
ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಡಾ. ಅಶ್ವತ್ಥ ನಾರಾಯಣ ಅವರ ಬಂಧನ ಆಗಬೇಕು- ಸಿದ್ದರಾಮಯ್ಯ ಆಗ್ರಹ https://valmikimithra.com/archives/6123 Sat, 19 Nov 2022 12:28:58 +0000 https://valmikimithra.com/?p=6123 ಬೆಂಗಳೂರು: ಮತಪಟ್ಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಡಾ. ಅಶ್ವತ್ಥ ನಾರಾಯಣ ಅವರ ಬಂಧನ ಆಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಚುನಾವಣಾ ಆಯೋಗಕ್ಕೆ ದೂರು

The post ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಡಾ. ಅಶ್ವತ್ಥ ನಾರಾಯಣ ಅವರ ಬಂಧನ ಆಗಬೇಕು- ಸಿದ್ದರಾಮಯ್ಯ ಆಗ್ರಹ appeared first on Valmiki Mithra.

]]>
ಬೆಂಗಳೂರು: ಮತಪಟ್ಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಡಾ. ಅಶ್ವತ್ಥ ನಾರಾಯಣ ಅವರ ಬಂಧನ ಆಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಮಾತನಾಡಿದ ಅವರು, ಬಿಜೆಪಿ ನಡೆಸಿದ ಷಡ್ಯಂತ್ರ ಇವಾಗ ಸಾರ್ವಜನಿಕ ಆಸ್ತಿ ಆಗಿ ಬಿಟ್ಟಿದೆ. ಈ ಅಕ್ರಮ ಇಡೀ ದೇಶಕ್ಕೆ ಗೊತ್ತಾಗಿದೆ.ಮತಪಟ್ಟಿ ಪರಿಷ್ಕರಣೆಗೆ ಚಿಲುಮೆ ಸಂಸ್ಥಿಗೆ ಬಿಬಿಎಂಪಿ ಕಮಿಷನರ್ ‌ಅನುಮತಿ ನೀಡಿದ್ದಾರೆ. ಆ ದುರಾತ್ಮ ಖಾಸಗಿಯಾಗಿ ಬಿಎಲ್ ಓ ನೇಮಕ ಮಾಡಿದ್ದಾನೆ. ಇದು ಕಾನೂನಿಗೆ ವಿರೋಧವಾಗಿದೆ ಎಂದರು.

ಅಕ್ರಮದ ಬಗ್ಗೆ ತನಿಖೆ ಮಾಡುತ್ತೇವೆ ಎನ್ನುತ್ತಾರೆ ರಾಜ್ಯ ಮುಖ್ಯ ಚುನಾವಣಾಧಿಕಾರಿ. ಆದರೆ ತನಿಖೆಯಿಂದ ಸತ್ಯ ಹೊರ ಬರಲ್ಲ, ಕ್ಷೇತ್ರ ವಿಭಾಗಾಧಿಕಾರಿ, ಬಿಬಿಎಂಪಿ ಕಮಿಷನರ್ ಅವರನ್ನು ತನಿಖೆ ಮಾಡಲು ಆಗುತ್ತಾ? ಸಿಎಂ ತನಿಖೆ ಮಾಡಲು ಆಗುತ್ತಾ? ಈ ಕಾರಣಕ್ಕಾಗಿ ನ್ಯಾಯಾಂಗ ತನಿಖೆಗೆ ನೀಡಿ ಎಂದು ಆಗ್ರಹ ಮಾಡಿದ್ದೇವೆ ಎಂದರು.

The post ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಡಾ. ಅಶ್ವತ್ಥ ನಾರಾಯಣ ಅವರ ಬಂಧನ ಆಗಬೇಕು- ಸಿದ್ದರಾಮಯ್ಯ ಆಗ್ರಹ appeared first on Valmiki Mithra.

]]>
6123
ಬಸವರಾಜ ಬೊಮ್ಮಾಯಿ ಅವರ ಮೇಲೆ ಎಫ್ಐಆರ್ ದಾಖಲಿಸಿ, ಬಂಧಿಸಬೇಕು – ರಣದೀಪ್ ಸಿಂಗ್ ಸುರ್ಜೇವಾಲಾ ಆಗ್ರಹ https://valmikimithra.com/archives/6048 Thu, 17 Nov 2022 06:36:30 +0000 https://valmikimithra.com/?p=6048 ಬೆಂಗಳೂರು: ‘ಖಾಸಗಿ ಸಂಸ್ಥೆಯೊಂದು ಮತದಾರರ ಅಂಕಿಅಂಶಗಳನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದು, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಕಾರಣ. ಅವರ ಮೇಲೆ ಎಫ್ಐಆರ್ ದಾಖಲಿಸಿ, ಬಂಧಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ

The post ಬಸವರಾಜ ಬೊಮ್ಮಾಯಿ ಅವರ ಮೇಲೆ ಎಫ್ಐಆರ್ ದಾಖಲಿಸಿ, ಬಂಧಿಸಬೇಕು – ರಣದೀಪ್ ಸಿಂಗ್ ಸುರ್ಜೇವಾಲಾ ಆಗ್ರಹ appeared first on Valmiki Mithra.

]]>
ಬೆಂಗಳೂರು: ‘ಖಾಸಗಿ ಸಂಸ್ಥೆಯೊಂದು ಮತದಾರರ ಅಂಕಿಅಂಶಗಳನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದು, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಕಾರಣ. ಅವರ ಮೇಲೆ ಎಫ್ಐಆರ್ ದಾಖಲಿಸಿ, ಬಂಧಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗ್ರಹಿಸಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ಗುರುವಾರ ಬೆಳಿಗ್ಗೆ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚಿಲುಮೆ’ ಎಂಬ ಸರ್ಕಾರೇತರ ಸಂಸ್ಥೆ ತನ್ನ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ ಸಾವಿರಾರು ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿದೆ. ಈ ಅಕ್ರಮದ ಹೊಣೆಯನ್ನು ಬಸವರಾಜ ಬೊಮ್ಮಾಯಿ ಹೊರಬೇಕು. ಅಲ್ಲದೆ, ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

‘ಮತದಾರರ ಡಾಟಾ ಸಂಗ್ರಹಿಸಲು ಖಾಸಗಿ ಸಂಸ್ಥೆಯವರಿಗೆ ಅವಕಾಶ ಸಿಕ್ಕಿದೆ ಹೇಗೆ? ಅಕ್ರಮವಾಗಿ ಸಂಗ್ರಹಿಸುತ್ತಿರುವುದು ಏಕ? ಬೂತ್ ಮಟ್ಟದ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ಅವರ ಸಹಕಾರವೇನಾದರೂ ಇದೆಯೇ? ಎಂದು ಸುರ್ಜೇವಾಲ ಪ್ರಶ್ನಿಸಿದರು,

The post ಬಸವರಾಜ ಬೊಮ್ಮಾಯಿ ಅವರ ಮೇಲೆ ಎಫ್ಐಆರ್ ದಾಖಲಿಸಿ, ಬಂಧಿಸಬೇಕು – ರಣದೀಪ್ ಸಿಂಗ್ ಸುರ್ಜೇವಾಲಾ ಆಗ್ರಹ appeared first on Valmiki Mithra.

]]>
6048
ರಾಜ್ಯ ಸರ್ಕಾರಿ ನೌಕರರು ನವಭಾರತದ ನಿರ್ಮಾಣಕ್ಕೆ ದುಡಿಯಬೇಕು..! https://valmikimithra.com/archives/5963 Fri, 11 Nov 2022 06:56:01 +0000 https://valmikimithra.com/?p=5963 ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಪ್ರತಿದಿನ ಒಂದು ಗಂಟೆ ಹೆಚ್ಚುವರಿಯಾಗಿ ದುಡಿಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನಿಯೋಗವು

The post ರಾಜ್ಯ ಸರ್ಕಾರಿ ನೌಕರರು ನವಭಾರತದ ನಿರ್ಮಾಣಕ್ಕೆ ದುಡಿಯಬೇಕು..! appeared first on Valmiki Mithra.

]]>
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಪ್ರತಿದಿನ ಒಂದು ಗಂಟೆ ಹೆಚ್ಚುವರಿಯಾಗಿ ದುಡಿಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನಿಯೋಗವು ಗುರುವಾರ ಸನ್ಮಾನಿಸಿದ ನಂತರ ಮಾತನಾಡಿದ ಅವರು, ಪ್ರತಿದಿನ ಇನ್ನೂ ಒಂದು ಗಂಟೆ ಹೆಚ್ಚುವರಿಯಾಗಿ ಕೆಲಸ ಮಾಡುವುದು ತಳಮಟ್ಟದ ಮಟ್ಟಕ್ಕೆ ತಲುಪಬೇಕು ಎಂದು ಹೇಳಿದರು.

ನವಭಾರತವನ್ನು ನಿರ್ಮಿಸಲು ನಾವೆಲ್ಲರೂ ಶ್ರಮಿಸಬೇಕು. ಭಾರತದ ಉದ್ದೇಶಿತ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯಲ್ಲಿ ಕರ್ನಾಟಕದ ಕೊಡುಗೆ ಒಂದು ಟ್ರಿಲಿಯನ್ ಡಾಲರ್ ಆಗಿರಬೇಕು. ಸರ್ಕಾರಿ ಸೇವೆಗೆ ಸೇರುವ ಸಮಯದಲ್ಲಿ ಮತ್ತು ಪ್ರಸ್ತುತ ಪರಿಸ್ಥಿತಿಯಲ್ಲಿ ವ್ಯತ್ಯಾಸವು ಖಂಡಿತವಾಗಿಯೂ ಇರುತ್ತದೆ ಎಂದು ಅವರು ಹೇಳಿದರು. ಸಮಯ ಮತ್ತು ಹಣ ಮುಖ್ಯ. ಸರಿಯಾದ ಸಮಯದಲ್ಲಿ ಸಂಪಾದಿಸುವುದು, ಸರಿಯಾದ ಹಣವು ಜೀವನವನ್ನು ಪ್ರೇರೇಪಿಸುತ್ತದೆ.

ಮಾಜಿ ಮುಖ್ಯ ಕಾರ್ಯದರ್ಶಿಯಿಂದ ಸರಿಯಾದ ವರದಿಯನ್ನು ನಿರೀಕ್ಷಿಸುತ್ತಿದ್ದಾರೆ. ನೌಕರರ ಸಹಕಾರವೂ ಮುಖ್ಯವಾಗಿದೆ. “2023 ರಲ್ಲಿ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಮತ್ತು ನಾವು 7 ನೇ ವೇತನ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ” ಎಂದು ಅವರು ಹೇಳಿದರು.

The post ರಾಜ್ಯ ಸರ್ಕಾರಿ ನೌಕರರು ನವಭಾರತದ ನಿರ್ಮಾಣಕ್ಕೆ ದುಡಿಯಬೇಕು..! appeared first on Valmiki Mithra.

]]>
5963
ಸರ್ಕಾರಿ ನೌಕರರ 7ನೇ ವೇತನ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ https://valmikimithra.com/archives/5610 Tue, 06 Sep 2022 11:11:12 +0000 https://valmikimithra.com/?p=5610 ಬೆಂಗಳೂರು: ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆಗೆ ಅಗತ್ಯವಾದ 7ನೇ ವೇತನ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಬೆಳಿಗ್ಗೆಯಿಂದ ಸಂಜೆವರೆಗೆ ಮಾಡುವ ಕೆಲಸ ಕರ್ತವ್ಯ ಎನಿಸುತ್ತದೆ. ಬದುಕಿನಲ್ಲಿ ಸೇವೆ ಮಾಡಿ

The post ಸರ್ಕಾರಿ ನೌಕರರ 7ನೇ ವೇತನ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ appeared first on Valmiki Mithra.

]]>
ಬೆಂಗಳೂರು: ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆಗೆ ಅಗತ್ಯವಾದ 7ನೇ ವೇತನ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಬೆಳಿಗ್ಗೆಯಿಂದ ಸಂಜೆವರೆಗೆ ಮಾಡುವ ಕೆಲಸ ಕರ್ತವ್ಯ ಎನಿಸುತ್ತದೆ. ಬದುಕಿನಲ್ಲಿ ಸೇವೆ ಮಾಡಿ ಸಂತೃಪ್ತಿ ಪಡೆಯುವುದು ಕಾಯಕ ಎಂದು ಹೇಳಿದರು. ಸರ್ಕಾರಕ್ಕೆ ತೆರಿಗೆ ಪಾವತಿಸುವ ಪ್ರಜೆಗಳೇ ನಮ್ಮ ಮಾಲೀಕರು. ಹಾಗಾಗಿ ಅದಿಕಾರಿಗಳು ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಅಳವಡಿಸಿಕೊಂಡು ಪ್ರಜೆಗಳ ನೋವು ನಲಿವುಗಳಿಗೆ ಸ್ಪಂದಿಸಿ ಎಂದು ಸಲಹೆ ಮಾಡಿದರು.

ಸರ್ಕಾರಿ ನೌಕರರು, ವಿಶೇಷವಾಗಿ ಪತ್ರಾಂಕಿತ ಎ ಮತ್ತು ಬಿ ಗುಂಪಿನ ನೌಕರರು, ಪುಣ್ಯ ಕೋಟಿ ಯೋಜನೆಯಡಿ 11,000 ರೂ.ಗೆ ದತ್ತು ಪಡೆದು, ಗೋ ಸಂರಕ್ಷಣೆ ಮಾಡುವಂತೆ ಮನವಿ ಮಾಡಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮಾತನಾಡಿ, ಸರ್ಕಾರಿ ಸೇವೆಗೆ ಬರಲು ದೇವರ ಆಶೀರ್ವಾದ ಇರಬೇಕು. ಹಾಗೆಯೆ ಸರ್ಕಾರಿ ನೌಕರರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ರಾಜ್ಯ ಸರ್ಕಾರದಿಂದ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆಯ ಸಂದರ್ಭದಲ್ಲಿ ಆರೋಗ್ಯ ಸಂಜೀವಿನಿ ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಚಾಲನೆ ನೀಡಿ 30 ನೌಕರರಿಗೆ ತಲಾ 50ಸಾವಿರ ರೂ. ನಗದು ಒಳಗೊಂಡ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು.

The post ಸರ್ಕಾರಿ ನೌಕರರ 7ನೇ ವೇತನ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ appeared first on Valmiki Mithra.

]]>
5610
”ಜಿನ್ನಾನೆಂದರೆ ಕಾಂಗ್ರೆಸ್ನವರಿಗೆ ಬಹಳ ಪ್ರೀತಿ. ಯಾಕಂದರೆ ದೇಶವನ್ನೇ ಒಡೆದು ಆಡಳಿತಕ್ಕೆ ಬಂದವರು” https://valmikimithra.com/archives/5528 Fri, 26 Aug 2022 09:19:58 +0000 https://valmikimithra.com/?p=5528 ಹಾವೇರಿ : ಕಾಂಗ್ರೆಸ್ ಇನ್ನೊಮ್ಮೆ ಇತಿಹಾಸ ಓದು ಅಂತಾ ಹೇಳಬೇಕು. ಅವರಿಗೆ ಯಾವಾಗಲೂ ಕನಸಿನಲ್ಲಿ ಜಿನ್ನಾನೆ ಕಾಣುತ್ತಾನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಹಾವೇರಿ ಜಿಲ್ಲೆ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ

The post ”ಜಿನ್ನಾನೆಂದರೆ ಕಾಂಗ್ರೆಸ್ನವರಿಗೆ ಬಹಳ ಪ್ರೀತಿ. ಯಾಕಂದರೆ ದೇಶವನ್ನೇ ಒಡೆದು ಆಡಳಿತಕ್ಕೆ ಬಂದವರು” appeared first on Valmiki Mithra.

]]>
ಹಾವೇರಿ : ಕಾಂಗ್ರೆಸ್ ಇನ್ನೊಮ್ಮೆ ಇತಿಹಾಸ ಓದು ಅಂತಾ ಹೇಳಬೇಕು. ಅವರಿಗೆ ಯಾವಾಗಲೂ ಕನಸಿನಲ್ಲಿ ಜಿನ್ನಾನೆ ಕಾಣುತ್ತಾನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಹಾವೇರಿ ಜಿಲ್ಲೆ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿದ ಅವರು, ಮೊಹಮ್ಮದ್ ಅಲಿ ಜಿನ್ನಾ ಮತ್ತು ಸಾವರ್ಕರ್ ಒಂದೇ ಎಂಬ ಕಾಂಗ್ರೆಸ್ನ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಕಿಡಿಕಾರಿದರು.

ಜಿನ್ನಾನೆಂದರೆ ಕಾಂಗ್ರೆಸ್ನವರಿಗೆ ಬಹಳ ಪ್ರೀತಿ. ಯಾಕಂದರೆ ದೇಶವನ್ನೇ ಒಡೆದು ಆಡಳಿತಕ್ಕೆ ಬಂದವರು. ಹೀಗಾಗಿ ಇದರ ಬಗ್ಗೆ ವಿಶ್ಲೇಷಣೆ ಮಾಡುವ ಅವಶ್ಯಕತೆಯೂ ಇಲ್ಲ, ಆಶ್ಚರ್ಯವೂ ಇಲ್ಲ ಎಂದರು.

ಸರ್ಕಾರದ ಮೇಲಿನ ಪಸೆರ್ಂಟೇಜ್ ಆರೋಪವು ರಾಜಕೀಯ ಪ್ರೇರಿತವಾಗಿದೆ. ಏನಾದರೂ ದಾಖಲೆಗಳಿದ್ದರೆ ಅವರು ಕೊಡಬೇಕು.

The post ”ಜಿನ್ನಾನೆಂದರೆ ಕಾಂಗ್ರೆಸ್ನವರಿಗೆ ಬಹಳ ಪ್ರೀತಿ. ಯಾಕಂದರೆ ದೇಶವನ್ನೇ ಒಡೆದು ಆಡಳಿತಕ್ಕೆ ಬಂದವರು” appeared first on Valmiki Mithra.

]]>
5528