Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-includes/feed-rss2.php on line 8
chief minister Basavaraj Bommai Archives - Valmiki Mithra https://valmikimithra.com/archives/tag/chief-minister-basavaraj-bommai News Paper Fri, 02 Dec 2022 12:37:09 +0000 en-US hourly 1 https://wordpress.org/?v=6.8.1 https://i0.wp.com/valmikimithra.com/wp-content/uploads/2021/07/cropped-WhatsApp-Image-2021-07-16-at-11.33.21-1.jpeg?fit=32%2C32&ssl=1 chief minister Basavaraj Bommai Archives - Valmiki Mithra https://valmikimithra.com/archives/tag/chief-minister-basavaraj-bommai 32 32 207262515 ಕರ್ನಾಟಕ ಸರ್ಕಾರ ಏನು ಕ್ರಮ ಕೈಗೊಂಡಿತ್ತೋ ಅದೇ ಕ್ರಮವನ್ನು ನಾವು ತೆಗೆದುಕೊಳ್ಳುತ್ತೇವೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ https://valmikimithra.com/archives/6352 Fri, 02 Dec 2022 12:37:09 +0000 https://valmikimithra.com/?p=6352 ಬೆಳಗಾವಿ: ಎರಡು ರಾಜ್ಯಗಳ ಮಧ್ಯೆ ಇರುವ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ

The post ಕರ್ನಾಟಕ ಸರ್ಕಾರ ಏನು ಕ್ರಮ ಕೈಗೊಂಡಿತ್ತೋ ಅದೇ ಕ್ರಮವನ್ನು ನಾವು ತೆಗೆದುಕೊಳ್ಳುತ್ತೇವೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
ಬೆಳಗಾವಿ: ಎರಡು ರಾಜ್ಯಗಳ ಮಧ್ಯೆ ಇರುವ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು

ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಡಿಸೆಂಬರ್ 06 ರಂದು ಬೆಳಗಾವಿಗೆ ಮಹಾರಾಷ್ಟ್ರದ ಸಚಿವರು ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಈಗಾಗಲೇ ಹಿಂದೆ ಹಲವಾರು ಬಾರಿ ಈ ಪ್ರಯತ್ನ ಗಳಾದಾಗ ಕರ್ನಾಟಕ ಸರ್ಕಾರ ಏನು ಕ್ರಮ ಕೈಗೊಂಡಿತ್ತೋ ಅದೇ ಕ್ರಮವನ್ನು ನಾವು ತೆಗೆದುಕೊಳ್ಳುತ್ತೇವೆ ಎಂದರು.

The post ಕರ್ನಾಟಕ ಸರ್ಕಾರ ಏನು ಕ್ರಮ ಕೈಗೊಂಡಿತ್ತೋ ಅದೇ ಕ್ರಮವನ್ನು ನಾವು ತೆಗೆದುಕೊಳ್ಳುತ್ತೇವೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
6352
ಸರ್ಕಾರ ಮತ್ತು ನನ್ನ ಮೇಲೆ ಗುರುತರವಾದ ಆರೋಪಗಳನ್ನು ಮಾಡಿದ್ದಾರೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ https://valmikimithra.com/archives/6062 Thu, 17 Nov 2022 10:04:45 +0000 https://valmikimithra.com/?p=6062 ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸೇರಿದಂತೆ ಮತ್ತಿತರ ಸರ್ಕಾರ ಮತ್ತು ನನ್ನ ಮೇಲೆ ಗುರುತರವಾದ ಆರೋಪಗಳನ್ನು ಮಾಡಿದ್ದಾರೆ. ಈ

The post ಸರ್ಕಾರ ಮತ್ತು ನನ್ನ ಮೇಲೆ ಗುರುತರವಾದ ಆರೋಪಗಳನ್ನು ಮಾಡಿದ್ದಾರೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸೇರಿದಂತೆ ಮತ್ತಿತರ ಸರ್ಕಾರ ಮತ್ತು ನನ್ನ ಮೇಲೆ ಗುರುತರವಾದ ಆರೋಪಗಳನ್ನು ಮಾಡಿದ್ದಾರೆ. ಈ ಕುರಿತು ನಾನು ಸಮಗ್ರ ತನಿಖೆ ನಡೆಸಲು ಸಂಬಂಧ ಪಟ್ಟ ಅಕಾರಿಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾಂಗ್ರೆಸ್ ಮಾಡಿರುವ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾದದ್ದು, ಸರ್ಕಾರ ಮತ್ತು ನಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಇದರಲ್ಲಿ ನಾನಾಗಲಿ, ನಮ್ಮ ಸಂಪುಟದ ಸಚಿವರು ಸೇರಿದಂತೆ ಯಾರೂ ಕೂಡ ಭಾಗಿಯಾಗಿಲ್ಲ. ಎಲ್ಲವೂ ಕಪೋಲ ಕಲ್ಪಿತ ಎಂದು ಸ್ಪಷ್ಟಪಡಿಸಿದರು.

ಇದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಪ್ರತಿಯೊಬ್ಬರೂ ಕೂಡ ಮತದಾರರ ಮಾಹಿತಿಯನ್ನು ಕಲೆ ಹಾಕುತ್ತಾರೆ. ಆದರೆ ಅವರ ವೈಯಕ್ತಿಕ ವಿಷಯಗಳನ್ನು ತೆಗೆದುಕೊಳ್ಳುವುದಿಲ್ಲ. ಕಾಂಗ್ರೆಸ್ ನವರು ನಾವೇನೊ ಸಾಸಿಬಿಟ್ಟಿದ್ದೇವೆಂಬ ಭ್ರಮೆಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.

The post ಸರ್ಕಾರ ಮತ್ತು ನನ್ನ ಮೇಲೆ ಗುರುತರವಾದ ಆರೋಪಗಳನ್ನು ಮಾಡಿದ್ದಾರೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
6062
ಸರ್ಕಾರಿ ನೌಕರರ 7ನೇ ವೇತನ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ https://valmikimithra.com/archives/5610 Tue, 06 Sep 2022 11:11:12 +0000 https://valmikimithra.com/?p=5610 ಬೆಂಗಳೂರು: ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆಗೆ ಅಗತ್ಯವಾದ 7ನೇ ವೇತನ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಬೆಳಿಗ್ಗೆಯಿಂದ ಸಂಜೆವರೆಗೆ ಮಾಡುವ ಕೆಲಸ ಕರ್ತವ್ಯ ಎನಿಸುತ್ತದೆ. ಬದುಕಿನಲ್ಲಿ ಸೇವೆ ಮಾಡಿ

The post ಸರ್ಕಾರಿ ನೌಕರರ 7ನೇ ವೇತನ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ appeared first on Valmiki Mithra.

]]>
ಬೆಂಗಳೂರು: ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆಗೆ ಅಗತ್ಯವಾದ 7ನೇ ವೇತನ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಬೆಳಿಗ್ಗೆಯಿಂದ ಸಂಜೆವರೆಗೆ ಮಾಡುವ ಕೆಲಸ ಕರ್ತವ್ಯ ಎನಿಸುತ್ತದೆ. ಬದುಕಿನಲ್ಲಿ ಸೇವೆ ಮಾಡಿ ಸಂತೃಪ್ತಿ ಪಡೆಯುವುದು ಕಾಯಕ ಎಂದು ಹೇಳಿದರು. ಸರ್ಕಾರಕ್ಕೆ ತೆರಿಗೆ ಪಾವತಿಸುವ ಪ್ರಜೆಗಳೇ ನಮ್ಮ ಮಾಲೀಕರು. ಹಾಗಾಗಿ ಅದಿಕಾರಿಗಳು ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಅಳವಡಿಸಿಕೊಂಡು ಪ್ರಜೆಗಳ ನೋವು ನಲಿವುಗಳಿಗೆ ಸ್ಪಂದಿಸಿ ಎಂದು ಸಲಹೆ ಮಾಡಿದರು.

ಸರ್ಕಾರಿ ನೌಕರರು, ವಿಶೇಷವಾಗಿ ಪತ್ರಾಂಕಿತ ಎ ಮತ್ತು ಬಿ ಗುಂಪಿನ ನೌಕರರು, ಪುಣ್ಯ ಕೋಟಿ ಯೋಜನೆಯಡಿ 11,000 ರೂ.ಗೆ ದತ್ತು ಪಡೆದು, ಗೋ ಸಂರಕ್ಷಣೆ ಮಾಡುವಂತೆ ಮನವಿ ಮಾಡಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮಾತನಾಡಿ, ಸರ್ಕಾರಿ ಸೇವೆಗೆ ಬರಲು ದೇವರ ಆಶೀರ್ವಾದ ಇರಬೇಕು. ಹಾಗೆಯೆ ಸರ್ಕಾರಿ ನೌಕರರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ರಾಜ್ಯ ಸರ್ಕಾರದಿಂದ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆಯ ಸಂದರ್ಭದಲ್ಲಿ ಆರೋಗ್ಯ ಸಂಜೀವಿನಿ ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಚಾಲನೆ ನೀಡಿ 30 ನೌಕರರಿಗೆ ತಲಾ 50ಸಾವಿರ ರೂ. ನಗದು ಒಳಗೊಂಡ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು.

The post ಸರ್ಕಾರಿ ನೌಕರರ 7ನೇ ವೇತನ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ appeared first on Valmiki Mithra.

]]>
5610
ನಾವು ಒಂದು ದೊಡ್ಡ ದೇಶ ಭಕ್ತಿ ಸಂಸ್ಥೆಯೊಂದಿಗೆ ಕೈ ಜೋಡಿಸಿಕೊಂಡಿದ್ದೇವೆ -ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ https://valmikimithra.com/archives/5538 Sat, 27 Aug 2022 05:48:28 +0000 https://valmikimithra.com/?p=5538 ಆರ್​ಎಸ್​ಎಸ್​ ಸಿದ್ಧಾಂತ, ದೇಶಭಕ್ತಿಯಿಂದಾಗಿ ನಾನು ಹೆಮ್ಮೆಯಿಂದ ನನ್ನನ್ನು ಆರ್​ಎಸ್​ಎಸ್​ ಜೊತೆಗೆ ಜೋಡಿಸಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಹೇಳಿದರು . ಇದರಲ್ಲಿ ಅನುಮಾನವಿಲ್ಲ. ನಾವು ಒಂದು ದೊಡ್ಡ ದೇಶ ಭಕ್ತಿ ಸಂಸ್ಥೆಯೊಂದಿಗೆ ಕೈ

The post ನಾವು ಒಂದು ದೊಡ್ಡ ದೇಶ ಭಕ್ತಿ ಸಂಸ್ಥೆಯೊಂದಿಗೆ ಕೈ ಜೋಡಿಸಿಕೊಂಡಿದ್ದೇವೆ -ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ appeared first on Valmiki Mithra.

]]>
ಆರ್​ಎಸ್​ಎಸ್​ ಸಿದ್ಧಾಂತ, ದೇಶಭಕ್ತಿಯಿಂದಾಗಿ ನಾನು ಹೆಮ್ಮೆಯಿಂದ ನನ್ನನ್ನು ಆರ್​ಎಸ್​ಎಸ್​ ಜೊತೆಗೆ ಜೋಡಿಸಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಹೇಳಿದರು .

ಇದರಲ್ಲಿ ಅನುಮಾನವಿಲ್ಲ. ನಾವು ಒಂದು ದೊಡ್ಡ ದೇಶ ಭಕ್ತಿ ಸಂಸ್ಥೆಯೊಂದಿಗೆ ಕೈ ಜೋಡಿಸಿಕೊಂಡಿದ್ದೇವೆ ಎಂದಿದ್ದಾರೆ.
ಇನ್ನು ಹಿಂದುಳಿದ ವರ್ಗಗಳಲ್ಲೇ ಅತಿ ಹಿಂದುಳಿದ ವರ್ಗಗಳಿವೆ. ಅವುಗಳನ್ನು ನಾವು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ಸೇರಿಸಿದ್ದಾಗ ಅವರಿಗೆ ನ್ಯಾಯ ಸಿಕ್ಕಿರಲಿಲ್ಲ. ಅದಕ್ಕಾಗಿ ಪ್ರತ್ಯೇಕ ಅನುದಾನವನ್ನು ಬಜೆಟ್ ನಲ್ಲಿ ಇಟ್ಟಿದ್ದೇವೆ.

ಇವತ್ತು ಆ ಬಜೆಟ್​ನ ವಿಶೇಷ ಯೋಜನೆಗಳನ್ನು ಹೇಳಿದ್ದೇನೆ. ಎಜ್ಯೂಕೇಷನ್, ಎಂಪ್ಲಾಯ್ಮೆಂಟ್, ಎಂಪವರ್ಮೆಂಟ್ ಈ ಮೂರಕ್ಕೂ ಒತ್ತುಕೊಟ್ಟು ಯೋಜನೆ ಮಾಡುತ್ತಿದ್ದೇವೆ ಎಂದಿದ್ದಾರೆ.

The post ನಾವು ಒಂದು ದೊಡ್ಡ ದೇಶ ಭಕ್ತಿ ಸಂಸ್ಥೆಯೊಂದಿಗೆ ಕೈ ಜೋಡಿಸಿಕೊಂಡಿದ್ದೇವೆ -ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ appeared first on Valmiki Mithra.

]]>
5538
ಉಕ್ರೇನ್‍ನಲ್ಲಿ ಉನ್ನತ ವ್ಯಾಸಂಗ ಮಾಡುತಿರುವರನು ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ https://valmikimithra.com/archives/3783 Fri, 25 Feb 2022 05:13:17 +0000 https://valmikimithra.com/?p=3783 ಬೆಂಗಳೂರು: ಉಕ್ರೇನ್‍ನಲ್ಲಿ ರಾಜ್ಯದಿಂದ ಉನ್ನತ ವ್ಯಾಸಂಗಕ್ಕೆ ಅನೇಕ ವಿದ್ಯರ್ಥಿಗಳು ತೆರಳಿದ್ದಾರೆ. ಇದೀಗ ಅಲ್ಲಿ ಸಂಘರ್ಷಮಯ ವಾತಾವರಣ ನಿರ್ಮಾಣವಾಗಿರುವುದರಿಂದ ಕರ್ನಾಟಕದ ವಿದ್ಯಾರ್ಥಿಗಳನ್ನು ಮರಳಿ ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

The post ಉಕ್ರೇನ್‍ನಲ್ಲಿ ಉನ್ನತ ವ್ಯಾಸಂಗ ಮಾಡುತಿರುವರನು ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
ಬೆಂಗಳೂರು: ಉಕ್ರೇನ್‍ನಲ್ಲಿ ರಾಜ್ಯದಿಂದ ಉನ್ನತ ವ್ಯಾಸಂಗಕ್ಕೆ ಅನೇಕ ವಿದ್ಯರ್ಥಿಗಳು ತೆರಳಿದ್ದಾರೆ. ಇದೀಗ ಅಲ್ಲಿ ಸಂಘರ್ಷಮಯ ವಾತಾವರಣ ನಿರ್ಮಾಣವಾಗಿರುವುದರಿಂದ ಕರ್ನಾಟಕದ ವಿದ್ಯಾರ್ಥಿಗಳನ್ನು ಮರಳಿ ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಕ್ರೇನ್ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದಾರೆ. ಅವರ ರಕ್ಷಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಅಲ್ಲಿನ ರಾಯಭಾರಿ ಕಚೇರಿಗೆ ವಿದ್ಯಾರ್ಥಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ ಎಂದರು. ಈ ಮೊದಲು ಯುದ್ಧ ಆರಂಭಕ್ಕೂ ಮೊದಲೇ ತಂಡ ತಂಡವಾಗಿ ಕರೆಸಿಕೊಳ್ಳಲಾಗುತ್ತಿತ್ತು. ಆದರೆ, ಈಗ ಉಳಿದಿರುವ ವಿದ್ಯಾರ್ಥಿಗಳು ಕೊನೆಯ ತಂಡವಾಗಿದೆ. ಬಹುತೇಕ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಯುದ್ಧ ಆರಂಭವಾದ ಕಾರಣ ಅಲ್ಲೇ ಸಿಲುಕಿದ್ದಾರೆ. ನೂರು ಮಂದಿ ಭಾರತೀಯ ವಿದ್ಯಾರ್ಥಿಗಳಲ್ಲಿ ಹತ್ತು ಜನ ನಮ್ಮ ರಾಜ್ಯದವರೇ ಆಗಿದ್ದಾರೆ. ಅವರನ್ನು ಸ್ವದೇಶಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ. ನಮ್ಮ ವಿದೇಶಾಂಗ ಕಾರ್ಯದರ್ಶಿ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದರು.

The post ಉಕ್ರೇನ್‍ನಲ್ಲಿ ಉನ್ನತ ವ್ಯಾಸಂಗ ಮಾಡುತಿರುವರನು ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
3783
ವಿಶೇಷ ಅನುದಾನ ನೀಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಶಾಸಕ ರಮೇಶ್ ಜಾರಕಿಹೊಳಿ ಕೃತಜ್ಞತೆ https://valmikimithra.com/archives/3427 Wed, 02 Feb 2022 12:21:04 +0000 https://valmikimithra.com/?p=3427 ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂಗಳು ಸೇರಿ ಒಟ್ಟು

The post ವಿಶೇಷ ಅನುದಾನ ನೀಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಶಾಸಕ ರಮೇಶ್ ಜಾರಕಿಹೊಳಿ ಕೃತಜ್ಞತೆ appeared first on Valmiki Mithra.

]]>
ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂಗಳು ಸೇರಿ ಒಟ್ಟು 52 ಕೋಟಿ ರೂ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ಕ್ಷೇತ್ರದಲ್ಲಿರುವ ಗ್ರಾಮೀಣ ರಸ್ತೆಗಳ ಸುಧಾರಣೆ ಗಾಗಿ ಪಂಚಾಯತ ರಾಜ್ಯ ಇಲಾಖೆಯ ಒಟ್ಟು 31 ಕೋಟಿ ರೂ ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲ ಪ್ರಮಾಣ ಹೆಚ್ಚಿಸಲು ಮತ್ತು ಜಾನುವಾರುಗಳ ಕುಡಿಯುವ ನೀರಿಗಾಗಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ ಒಟ್ಟು 19 ಕೋಟಿ ರೂ ಮುಜರಾಯಿ ಇಲಾಖೆಯಿಂದ ಮಠಗಳ ಅಭಿವೃದ್ಧಿಪಡಿಸಲು ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಮಠಗಳಿಗೆ ತಲಾ 25 ಲಕ್ಷ ರೂಗಳನ್ನು ನಗರದ ಶ್ರೀ ಶೂನ್ಯ ಸಂಪಾದನ ಮಠ, ಮರಡಿ ಮಠದ ಶ್ರೀ ಕಾಡಸಿದ್ದೇಶ್ವರ ಮಠ, ಸುಲದಾಳ ಶ್ರೀ ಜಡಿ ಸಿದ್ದೇಶ್ವರ ಮಠ, ಹಾಗೂ ಮಮದಾಪೂರದ ಶ್ರೀ ಚರಮೂರ್ತೇಶ್ವರ ಮಠ, ಸೇರಿ ಕ್ಷೇತ್ರದ 8 ಮಠಗಳಿಗೆ ಮುಜರಾಯಿ ಇಲಾಖೆಯಿಂದ ಒಟ್ಟು ಎರಡು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ.
ಮುಂಬರುವ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ರಮೇಶ್ ಜಾರಕಿಹೊಳಿ ಅವರು ಹೇಳಿದ್ದಾರೆ.

ಗೋಕಾಕ ಮತಕ್ಷೇತ್ರದ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಬ್ರಿಡ್ಜ್ ಕಂ ಬ್ಯಾರೇಜ್ ಹಾಗೂ ಮಠಗಳ ಅಭಿವೃದ್ಧಿಗಾಗಿ ಒಟ್ಟು 52 ಕೋಟಿ ರೂಗಳ ವಿಶೇಷ ಅನುದಾನ ನೀಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಶಾಸಕ ರಮೇಶ್ ಜಾರಕಿಹೊಳಿ ಅವರು ಕೃತಜ್ಞತೆ ತಿಳಿಸಿದ್ದಾರೆ.

The post ವಿಶೇಷ ಅನುದಾನ ನೀಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಶಾಸಕ ರಮೇಶ್ ಜಾರಕಿಹೊಳಿ ಕೃತಜ್ಞತೆ appeared first on Valmiki Mithra.

]]>
3427