colornews
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121The post ತುಮಕೂರಿನಲ್ಲಿ ಇಬ್ಬರು ದಲಿತ ಯುವಕರ ಹತ್ಯೆ ಕುರಿತು ಗಿರೀಶ್ ತಾಯಿ ಹೇಳಿದ್ದು ಹೀಗೆ..! appeared first on Valmiki Mithra.
]]>ಗಿರೀಶ್ ತಾಯಿ ಮಾತನಾಡಿ ಬೇರೊಂದು ಊರಿನಲ್ಲಿರುವ ಅವರ ಅಣ್ಣ ಕೆಟ್ಟು ಹೋಗಿದ್ದ ಟಿವಿ ರಿಪೇರಿ ಮಾಡಿಸಿ ಕಳಿಸಿದ್ದ. ಅಂದು ಗಿರೀಶ, ‘ಅವ್ವ ಟಿ.ವಿ. ಚೆನ್ನಾಗಿ ಬರುತ್ತ ನೋಡು’ ಅಂದ. ‘ಯಾಕೋ ಕತ್ತಕತ್ತಲಾಗಿ ಬರುತ್ತಲ್ಲೋ, ಏನ್ ರಿಪೇರಿ ಮಾಡಿಸಿದ್ದಾನೋ. ಅಣ್ಣನಿಗೆ ಹೇಳೋದನ್ವೇನೋ….’ ಅಂದೆ. ಜೊತೆಯಲ್ಲಿ ಗಿರೀಶ ಅನ್ನೋನು ಬಂದಿದ್ದನಲ್ಲ, ಅವನಿಗೂ ಊಟ ಇಕ್ಕೊಟ್ಟೆ. ಇಬ್ಬರೂ ಊಟ ಮಾಡಿದ್ರು. ಅವನು ಮತ್ತೊಬ್ಬ ಗಿರೀಶ ಕುರ್ಚಿ ಮೇಲೇ ಕೂತುಕೊಂಡ. ಇವನು ಮಂಚದ ಮೇಲೆ ಮಲಗಿ ಟಿವಿ ನೋಡ್ತಾ ಇದ್ದ. ನಂದೀಶ (ಲಿಂಗಾಯತ ಜಾತಿಯವನು) ಮನೆಯ ಬಳಿ ಬಂದು ಗಿರೀಶ್ನನ್ನು ಕರೆದ. ಮಲಗಿಕೊಳ್ಳಪ್ಪ ಅಂದರೂ ಕೇಳದೆ ನಂದಿಯನ್ನು ಮಾತನಾಡಿಸಿಕೊಂಡು ಬರಲು ಹೋದ. ಟಿ.ವಿ. ಆಫ್ ಮಾಡಿಕೊಂಡು ಹತ್ತು ಹನ್ನೊಂದು ಗಂಟೆತನಕ ಕಾದೆ, ಬರಲಿಲ್ಲ. ಊರಲ್ಲಿ ಕೊಲ್ಲಾಪುರದಮ್ಮನ ಜಾತ್ರೆ ನಡೆಯುತ್ತಿದೆ ಗಿರೀಶ ದೇವ್ರು ನೋಡುತ್ತಿದ್ದಾನೆ ಅಂತ ಮಲಗಿಕೊಂಡು ಬಿಟ್ಟೆ. ಬೆಳಿಗ್ಗೆ ಈ ಇಚಾರ ಗೊತ್ತಾಯ್ತು. ಯಾರು ಏನು ಮಾಡಿದ್ರು ಅಂತಾನೇ ಗೊತ್ತಿಲ್ಲ. ಡೈಲಿ ದೇವ್ರರಿಗೆ, ಅಪ್ಪನ ಫೋಟೋಕ್ಕೆ ಕೈ ಮುಗಿದು ಕೆಲಸಕ್ಕೆ ಹೋದ್ರೆ ಸಂಜೆಗೆ ಮನೆಗೆ ಬಂದು ಬಿಡೋನು. ಅವತ್ತು ಕೂಡ ಬಂದು ಮನೆಯಲ್ಲಿದ್ದ…” ಎನ್ನುತ್ತಾ ಗಿರೀಶ್ ತಾಯಿ ಗೌರಮ್ಮ ಕಣ್ಣೀರು ಹಾಕಿದರು.
ಕೊಲೆಯ ಕಾರಣ ಇನ್ನೂ ಹೊರಬಿದ್ದಿಲ್ಲ. ತಿಗಳ ಸಮುದಾಯದ ಕೆಲವರನ್ನು ಬಂಧಿಸಿ ಗ್ರಾಮದಲ್ಲಿ ಮಹಜರನ್ನೂ ನಡೆಸಿದ್ದಾರೆ. ತಲೆಮರೆಸಿಕೊಂಡಿರುವ ಕೆಲವರಿಗೆ ಹುಡುಕಾಟ ನಡೆಸಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ಆವರಿಸಿದೆ. ಶಿರಾ- ನೆಲ್ಲಿಗೆರೆ ರಸ್ತೆಯಲ್ಲಿರುವ ಈ ಗ್ರಾಮದಲ್ಲಿ ಸವರ್ಣೀಯರು ಪ್ರಕರಣದ ಕುರಿತು ಮಾತನಾಡಲು ಸಿದ್ದರಿಲ್ಲ. ಸದಾ ಗಿಜಿಗಿಜಿ ಎನ್ನುತ್ತಿದ್ದ ಬಸ್ ಸ್ಟ್ಯಾಂಡ್ನಲ್ಲಿ ಈಗ ಯಾರೂ ಸೇರುತ್ತಿಲ್ಲ. ಇತ್ತ ಸಂತ್ರಸ್ತ ಕುಟುಂಬಕ್ಕೆ ಗ್ರಾಮದಲ್ಲಿ ನೆರವಿನ ಹಸ್ತವೂ ದೊರಕುತ್ತಿಲ್ಲ.
ಗಿರೀಶ್ ಮೇಲೆ ಕಳ್ಳತನದ ಆರೋಪ ಹೊರಿಸಿರುವ ಕುರಿತು ಮಾತನಾಡಿದ ತಾಯಿ ನನ್ನ ಮಗ ಮಲದ ಗುಂಡಿ ಕ್ಲೀನ್ ಮಾಡುತ್ತಿದ್ದ. ಯಾವುದೇ ಕೆಲಸ ಇಲ್ಲದಿದ್ದಾಗ ಮಲದ ಗುಂಡಿ ಶುಚಿಗೊಳಿಸುವ ಕೆಲಸಕ್ಕೆ ಹೋಗುತ್ತಿದ್ದ. ಈ ಕೆಲಸ ಮಾಡೋರು, ಕಳ್ಳತನ ಮಾಡುತ್ತಾರಾ ಸ್ವಾಮಿ?” ಎಂದು ಪ್ರಶ್ನಿಸಿದರು.
ಊರಲೆಲ್ಲ ತಿರ್ಕೊಂಡು ಬಂದು, ರೊಟ್ಟಿಯನ್ನು ಮಡಿಲಲ್ಲಿ ಕಟ್ಟಿಕೊಂಡು ಬಂದು ಮಕ್ಕಳನ್ನು ಸಾಕಿದೆ. ಗ್ರಾಮದಲ್ಲಿ ಅಕ್ಕಿ, ಅಸೀಟು, ಕಾಯಿ ಇಸ್ಕೊಂಡು ಬಂದು ಸಾಕಿದ್ದೀನಿ. ನನ್ನ ಮಗನನ್ನು ನನ್ನ ಗ್ರಾಮದಲ್ಲಿ ಕೊಲೆ ಮಾಡ್ತಾರೆ, ನನ್ನ ಮಕ್ಕಳಿಗೆ ನರಕ ಕೊಡ್ತಾರೆ ಅಂತ ನಾನು ಕಂಡಿರಲಿಲ್ಲ” ಎಂದು ದುಃಖಿಸಿದರು.
ನಂದಿ ಬಂದು ಕರೆದಾಗ ಹೋಗಿ ಬರ್ತೀನಿ ಅಂತ ಗಿರೀಶ ಹೊರಗೆ ಹೋದ. ಜೊತೆಯಲ್ಲಿದ್ದ ಇನ್ನೊಬ್ಬನೂ ನಾನು ಬರ್ತೀನಿ ಅಂತ ಹೋದ. ನಾನು ಮತ್ತು ನನ್ನ ಮಗ ಗಿರೀಶ ಇಬ್ಬರೇ ಊರಿನಲ್ಲಿ ವಾಸವಿದ್ದೆವು. ಹಿರಿಯ ಮಗ ಶ್ರೀಧರ ಅಜ್ಜಿ ಮನೆಯಲ್ಲಿದ್ದ. ಇನ್ನು ಮೂರು ಜನ ಹೆಣ್ಣು ಮಕ್ಕಳು ಗಂಡನ ಮನೆಯಲ್ಲಿದ್ದಾರೆ” ಎಂದು ಇಳಿವಯಸ್ಸಿನ ಗೌರಮ್ಮ ವಿವರಿಸಿದರು.
“ಯಾರು ಕೊಲೆ ಮಾಡಿದ್ದಾರೆ, ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆಂದು ಗೊತ್ತಿಲ್ಲ. ಪೋಸ್ಟ್ಮಾಟಂ ಮಾಡಿದ ಮೇಲೆ ಬಾಡಿ ನೋಡಿದೆ. ಬೆನ್ನ ಮೇಲೆ ತೆಂಗಿನ ಗರಿ ಹಾಕಿ ಸುಟ್ಟುಬಿಟ್ಟಿದ್ದಾರೆ. ಮೈಮೇಲೆ ಒಂದು ಇಂಚೂ ಜಾಗವಿಲ್ಲದಂತೆ ಹೊಡೆದಿದ್ದಾರೆ. ಕಣ್ಣು ಮೂಗು, ಮುಖ ಮೂತಿ ಏನು ನೋಡಿಲ್ಲ. ಬರ್ಬರವಾಗಿ ಸಾಯಿಸಿ ಕಟ್ಟೆಯಲ್ಲಿ ಎಸೆದಿದ್ದಾರೆ. ನನ್ನ ತಮ್ಮನ ಸ್ನೇಹಿತ ಗಿರೀಶ್ನನ್ನೂ ಹೀಗೆಯೇ ಕೊಂದಿದ್ದಾರೆ. ನನ್ನ ತಮ್ಮ ಕೂಲಿಗೀಲಿ ಮಾಡಿಕೊಂಡು ಆಟೋ ಗಿಟೋ ಓಡಿಸಿಕೊಂಡು ಇದ್ದ. ಯಾರ ಸಹವಾಸಕ್ಕೂ ಹೋಗುತ್ತಿರಲಿಲ್ಲ. ನನ್ನ ತಮ್ಮನ ಸಾವಿಗೆ ನ್ಯಾಯ ದೊರಕಬೇಕಷ್ಟೇ. ನನ್ನ ತಂದೆ, ತಮ್ಮ, ನಾನು ಊರಿನಲ್ಲಿ ಒಳ್ಳೆಯ ಹೆಸರು ಸಂಪಾದನೆ ಮಾಡಿದ್ದೇವೆ. ಯಾವುದೇ ಕೆಟ್ಟ ಹೆಸರು ಇಲ್ಲ. ಏನಕ್ಕೆ ಕೊಲೆಯಾದ ಅಂತ ಗೊತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.
“ನನ್ನ ತಮ್ಮ ಹಾಗೂ ಮಂಚಲದೊರೆಯ ಗಿರೀಶ್ ಕೆಲಸಕ್ಕೆ ಹೋಗುತ್ತಿದ್ದರಂತೆ. ಇಬ್ಬರೂ ಮನೆಗೆ ಬಂದಿದ್ದಾರೆ. ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ನಾನು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದೇನೆ. ಮೊದಲು ಅಕ್ಟ್ರೆಸ್ಟ್ರಾ ನಡೆಸುತ್ತಿದ್ದೆ. ಕೊರೊನಾ ಬಂದ ಮೇಲೆ ಅದೂ ನಿಂತು ಹೋಗಿದೆ. ಕೊಲೆಯಾದ ದಿನ ನಾನು ಅದಲಗೆರೆಯಲ್ಲಿರುವ ನನ್ನ ಅಜ್ಜಿಯ ಮನೆಯಲ್ಲಿದ್ದೆ. ನಮ್ಮ ತಾಯಿ ತಮ್ಮ ಮಾತ್ರ ಊರಿನಲ್ಲಿ ವಾಸವಿದ್ದರು. ಈ ಒಂದೂವರೆ ವರ್ಷದಲ್ಲಿ ನಮ್ಮ ಮನೆಯಲ್ಲಿ ಮೂರು ಹೆಣ ಬಿದ್ದಿವೆ. ನಮ್ಮ ತಂದೆ ಸತ್ತು ಒಂದು ವರ್ಷದ ಮೇಲೆ ಐದು ತಿಂಗಳಾಯಿತು. ನಮ್ಮ ಅಜ್ಜಿ ಸತ್ತು ಐದು ತಿಂಗಳಾಯಿತು. ಈಗ ನನ್ನ ತಮ್ಮ ಸತ್ತಿದ್ದಾನೆ. ನಾನೀಗ ಏಕಾಂಗಿ ಆಗಿದ್ದೇನೆ. ಯಾರೂ ಮಾತನಾಡಿಸುತ್ತಿಲ್ಲ. ಎಲ್ಲ ಹೆದರಿಕೊಂಡಿದ್ದಾರೆ. ಇಡೀ ಊರನ್ನೇ ಎದುರು ಹಾಕಿಕೊಂಡೆವಾ ಅಂತ ನಮಗೂ ಭಯ ಆಗುತ್ತಿದೆ. ನಾನು ಒಬ್ಬೊಂಟಿಗ. ನನ್ನ ಮಾವ, ಅಣ್ಣತಮ್ಮಂದಿರನ್ನು ಬಿಟ್ಟರೆ ನನ್ನೊಂದಿಗೆ ಯಾರೂ ಇಲ್ಲ. ಜೀವನ ಮಾಡೋಕೆ ಭಯ ಆಗುತ್ತಿದೆ” ಎಂದು ನೋವು ತೋಡಿಕೊಂಡರು.
ಊರಿನಲ್ಲಿ ಮಾದಿಗ ಜನಾಂಗದವರ 30 ಮನೆಗಳಿವೆ. ಲಿಂಗಾಯತ ಸಮುದಾಯದವರ 90 ಮನೆಗಳಿವೆ. ತಿಗಳರ ಮನೆಗಳು ಸುಮಾರು 200ಕ್ಕೂ ಹೆಚ್ಚಿವೆ. ಹಂದಿ ಜೋಗರ ಮನೆಗಳು ಹತ್ತು ಇವೆ. ಆಚಾರಿ ಸಮುದಾಯದ ಮೂರು ಮನೆಗಳಿವೆ. ಪ್ರಕರಣದ ಬಳಿಕ ದಲಿತರನ್ನೂ ಪೊಲೀಸರು ಎಳೆದುಕೊಂಡು ಹೋಗಿದ್ದಾರೆ. ಲಿಂಗಾಯತ, ತಿಗಳ ಸಮುದಾಯದವರನ್ನೂ ಕರೆದುಕೊಂಡು ಹೋಗಿದ್ದಾರೆ” ಎಂದು ಮಾಹಿತಿ ನೀಡಿದರು.
ಶ್ವಾನ ದಳದವರು ಮಹಜರು ನಡೆಸಿದಾಗ ತಿಗಳ ಸಮುದಾಯಕ್ಕೆ ಸೇರಿದ್ದ ಕೆಲವರ ಮನೆಗಳತ್ತ ನಾಯಿಗಳು ಓಡಿ ಹೋಗಿದ್ದರ ಕುರಿತು ಮಾತನಾಡಿದ ಶ್ರೀಧರ್, “ಅದನ್ನು ಮೇಕೆರಂಗಯ್ಯನವರ ಮನೆ ಪೋಕಿ (ಓಣಿ) ಅಂತಾರೆ. ಅಲ್ಲಿ ಕುಂಬಳಯ್ಯ ಮತ್ತು ಹುಚ್ಚಯ್ಯ ಅವರ ಮನೆಯ ಬಳಿ ನಾಯಿಗಳು ಹೋಗಿದ್ದವು. ಆದರೆ ಆ ಮನೆಗಳಿಗೆ ಬೀಗ ಹಾಕಲಾಗಿತ್ತು” ಎಂದು ತಿಳಿಸಿದರು.
ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಂತ್ವಾನ ತುಂಬಿದ ಜಿಪಂ ಮಾಜಿ ಸದಸ್ಯ ವೈ.ಎಚ್.ಹುಚ್ಚಯ್ಯ ಮಾತನಾಡಿ, “‘ತಾಲ್ಲೂಕಿನ ಜನಪ್ರತಿನಿಧಿಗಳು ಸ್ಥಳಕ್ಕೆ ಬಂದಿಲ್ಲ. ಕ್ಷೇತ್ರದ ಬಿಜೆಪಿ ಶಾಸಕ ಮಸಾಲೆ ಜಯರಾಂ ಗ್ರಾಮಕ್ಕೆ ಭೇಟಿ ಮಾಡಿ ಸಂತ್ರಸ್ತರಿಗೆ ಸಂತ್ವಾನ ಹೇಳಿಲ್ಲ. ಇದು ಜಾತಿ ಆಧಾರಿತ ಕೊಲೆ. ಬೇರೆ ಜಾತಿಯವರಾಗಿದ್ದರೆ ಇಷ್ಟೊಂದು ನಿರ್ಧಯವಾಗಿ ಕೊಲೆ ಮಾಡುತ್ತಿಲಿಲ್ಲ. ಗಲಾಟೆ ಆಗಿರುತ್ತಿತ್ತೇನೋ ಅಷ್ಟೇ. ಈ ಕೊಲೆಯನ್ನು ನೋಡಿದರೆ- ಈ ದಲಿತರು ಏನು ಮಾಡಿಯಾರು? ಕಡಿದು ಬಿಸಾಕೋಣ ಎಂದು ಕೃತ್ಯ ಎಸಗಿದಂತಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕೆಲಸ ಮಾಡಬೇಕು. ಸಂತ್ರಸ್ತ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರವನ್ನು ಸರ್ಕಾರ ನೀಡಬೇಕು. ಗಿರೀಶ್ ಸಹೋದರರಾದ ಶ್ರೀಧರ್ ಅವರಿಗೆ ಸರ್ಕಾರಿ ಕೆಲಸವನ್ನು ಕೊಡಬೇಕು. ಊರಿನಲ್ಲಿ ಬಿಗುವಿನ ವಾತಾವರಣ ಇದೆ. ಕಾನೂನಿನ ರಕ್ಷಣೆಯನ್ನು ಕುಟುಂಬಕ್ಕೆ ಒದಗಿಸಬೇಕು” ಎಂದು ಆಗ್ರಹಿಸಿದರು.
“ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಸಂವಿಧಾನ, ಕಾನೂನು ಇದೆ. ಆದರೂ ಕುರಿ, ಕೋಳಿಯ ರೀತಿ ಮನುಷ್ಯರನ್ನು ಕೊಲ್ಲುತ್ತಿದ್ದಾರೆ ಎಂದರೆ ಇಲ್ಲಿ ಪ್ರಜಾಪ್ರಭುತ್ವ ಇದೆಯಾ? ಬಿಹಾರ, ಉತ್ತರ ಪ್ರದೇಶದಲ್ಲೂ ನಡೆಯದಂತಹ ಕಗ್ಗೊಲೆಗಳು ಇಲ್ಲಿ ನಡೆದಿದೆ” ಎಂದು ವಿವಾದಿಸಿದರು.
The post ತುಮಕೂರಿನಲ್ಲಿ ಇಬ್ಬರು ದಲಿತ ಯುವಕರ ಹತ್ಯೆ ಕುರಿತು ಗಿರೀಶ್ ತಾಯಿ ಹೇಳಿದ್ದು ಹೀಗೆ..! appeared first on Valmiki Mithra.
]]>The post ತುಮಕೂರು ಜಿಲ್ಲೆಯಲ್ಲಿ ಇಬ್ಬರು ದಲಿತ ಯುವಕರನ್ನು ಥಳಿಸಿ, ಕೊಂದ ದುಷ್ಕರ್ಮಿಗಳು..! appeared first on Valmiki Mithra.
]]>ಮೃತರನ್ನು ತುಮಕೂರಿನ ಗಿರೀಶ್ ಮೂಡಲಗಿರಿಯಪ್ಪ ಮತ್ತು ಮಂಚಾಲದೊರೆ ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ.
ಗಿರೀಶ್ ಮೃತದೇಹ ಹೊಲದಲ್ಲಿ ಪತ್ತೆಯಾಗಿದ್ದರೆ, ಪೆದ್ದನಹಳ್ಳಿ ಗಿರೀಶ್ ಮೃತದೇಹ ಕೆರೆಯಲ್ಲಿ ಸಿಕ್ಕಿದೆ. ಗುರುವಾರ ರಾತ್ರಿ (ಏ.21) ಗ್ರಾಮದಲ್ಲಿ ಸ್ಥಳೀಯ ದೇವರ ಉತ್ಸವ ನಡೆದಿದೆ. ಈ ವೇಳೆ ಆರೋಪಿಗಳು ಪರಿಶಿಷ್ಟ ಸಮುದಾಯಕ್ಕೆ ಸೇರಿದ ಈ ಇಬ್ಬರು ಯುವಕರನ್ನು ಪುಸಲಾಯಿಸಿ, ಕರೆದೊಯ್ದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಲಿಂಗಾಯತ ಸಮುದಾಯಕ್ಕೆ ಸೇರಿದ ನಂದೀಶ್ ಎಂಬಾತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಏ.21ರ ರಾತ್ರಿ ಮನೆಗೆ ಬಂದು ಮಗನನ್ನು ಕರೆದುಕೊಂಡು ಹೋಗಿದ್ದ, ನಂತರ ಮಗ ಮನೆಗೆ ಬರಲಿಲ್ಲʼ ಎಂದು ಪೆದ್ದನಹಳ್ಳಿ ಗಿರೀಶ್ ಪೋಷಕರು ದೂರು ನೀಡಿದ್ದಾರೆ. ಕುಟುಂಬಸ್ಥರ ಮಾಹಿತಿ ಮೇರೆಗೆ ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಆರೋಪಿ ನಂದೀಶ್ ಎಂಬಾತ ಮೃತ ಪೆದ್ದನಹಳ್ಳಿ ಗಿರೀಶ್ನ ಮನೆಗೆ ಬಂದು ಹೊರ ಕರೆದುಕೊಂಡು ಹೋಗಿದ್ದಾನೆ. ನಂತರ ತನ್ನ ಸ್ನೇಹಿತರ ಜೊತೆ ಸೇರಿ ಬೆಂಕಿಯಿಂದ ಸುಟ್ಟು ಕಿರುಕುಳ ನೀಡಿರುವುದಲ್ಲದೆ, ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಈ ವೇಳೆ ಗಿರೀಶ್ ಮೂಡಲಗಿರಿಯಪ್ಪ ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೋರ್ವ ಗಿರೀಶ್ ಮೃತದೇಹವನ್ನು ಕೆರೆಯೊಂದಕ್ಕೆ ಎಸೆಯಲಾಗಿದೆ.ಸಂಪೂರ್ಣ ತನಿಖೆಯ ನಂತರ ಕೊಲೆಗೆ ನಿಖರ ಕಾರಣ ತಿಳಿಯಲಿದೆ” ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸುಮಾರು 13 ಜನರನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ನಂದೀಶ್ ಎಂಬಾತನನ್ನು ಸರಿಯಾಗಿ ತನಿಖೆ ಮಾಡಿದರೆ ಸತ್ಯ ಹೊರಬೀಳಲಿದೆ ಎಂದು ದಲಿತ ಸಂಘಟನೆಗಳ ಮುಖಂಡರೆಲ್ಲ ಒತ್ತಾಯಿಸಿದ್ದಾರೆ.
The post ತುಮಕೂರು ಜಿಲ್ಲೆಯಲ್ಲಿ ಇಬ್ಬರು ದಲಿತ ಯುವಕರನ್ನು ಥಳಿಸಿ, ಕೊಂದ ದುಷ್ಕರ್ಮಿಗಳು..! appeared first on Valmiki Mithra.
]]>