colornews
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121The post ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು. ಈ ಪೈಕಿ ಕೇವಲ ಶೇ.10ರಷ್ಟು ಭರವಸೆಗಳನ್ನು ಮಾತ್ರ ಈಡೇರಿಸಿದೆ- ಸಿದ್ದರಾಮಯ್ಯ appeared first on Valmiki Mithra.
]]>ಶುಕ್ರವಾರ ಕೃಷ್ಣಾ ಜಲಾನಯನ ನೀರಾವರಿ ಯೋಜನೆ ಕುರಿತ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಜನತೆ ಬರುವ ಚುನಾವಣೆಯಲ್ಲಿ ನಮಗೆ ಆಶೀರ್ವದಿಸಿದರೆ ಖಂಡಿತವಾಗಿಯೂ ಪ್ರತಿ ವರ್ಷ ರೂ.40,000 ಕೋಟಿ ವೆಚ್ಚ ಮಾಡಿ ರಾಜ್ಯದ ಕೃಷ್ಣಾ, ಭದ್ರಾ, ಎತ್ತಿನಹೊಳೆ, ಮೇಕೆದಾಟು ಸೇರಿದಂತೆ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸಂಕಲ್ಪ ಮಾಡಲಾಗಿದೆ ೆಂದು ಹೇಳಿದರು.
ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು. ಈ ಪೈಕಿ ಕೇವಲ ಶೇ.10ರಷ್ಟು ಭರವಸೆಗಳನ್ನು ಮಾತ್ರ ಈಡೇರಿಸಿದೆ. ಆದರೆ, ಈ ಹಿಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ 165 ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿತ್ತು. ಈ ಪೈಕಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಕಾಂಗ್ರೆಸ್ ನುಡಿದಂತೆ ನಡೆಯುವ ಸರ್ಕಾರವಾಗಿದೆ.
The post ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು. ಈ ಪೈಕಿ ಕೇವಲ ಶೇ.10ರಷ್ಟು ಭರವಸೆಗಳನ್ನು ಮಾತ್ರ ಈಡೇರಿಸಿದೆ- ಸಿದ್ದರಾಮಯ್ಯ appeared first on Valmiki Mithra.
]]>The post ಥಿಯೇಟರ್ ನಲ್ಲಿ ಶಿವಣ್ಣ ಗರಂ ಆಗಿದ್ದೇಕೆ..? appeared first on Valmiki Mithra.
]]>ವೇದ ಸಿನಿಮಾ ನಿಜಕ್ಕೂ ಗಂಡಸರಿಗೆ ಎಚ್ಚರಿಕೆ ಘಂಟೆಯಾಗಿದೆ. ಮಹಿಳೆಯರಿಗೆ ಕಾನ್ಫಿಡೆನ್ಸ್ ತುಂಬುವ ಕೆಲಸ ಕೂಡ ಮಾಡಿದೆ. ಚಿತ್ರವನ್ನ ನೋಡಿದ ಪ್ರೇಕ್ಷಕರಿಗೆ ಒಂದು ಧನ್ಯವಾದ ಹೇಳಬೇಕು ಎಂದು ಸಿನಿಮಾ ಟೀಮ್ ಹೇಳಿದೆ.
ಶಿವರಾಜ್ ಕುಮಾರ್ ತಮ್ಮ ಅಭಿಮಾನಿಗಳ ಜೊತೆಗೆ ಆರಾಮಾಗಿ ಇರುತ್ತಾರೆ.ಶಿವರಾಜ್ ಕುಮಾರ್ ಸದ್ಯ ಥಿಯೇಟರ್ ವಿಸಿಟ್ ಮಾಡುತ್ತಿದ್ದಾರೆ.ಇದೆ ರೀತಿ ಶಿವಣ್ಣ ನೋಡಿದ ಅಭಿಮಾನಿಗಳ ಖುಷಿಗೆ ಪರವೇ ಇರಲಿಲ್ಲ..ಮೊದಲು ಮಾತನಾಡಲು ಬಿಡ್ರೋ. ಹೀಗೆ ಕಿರುಚಾಡಿದ್ರೆ ಹೇಗೆ, ನಾವು ಯಾಕೆ ಬಂದಿದ್ದೇವೆ ಅನ್ನೋದೆ ನಿಮಗೆ ಗೊತ್ತಾಗೋದಿಲ್ಲ ಎಂದು ಅಭಿಮಾನಿಗಳಿಗೆ ಶಿವಣ್ಣ ಪ್ರೀತಿಯಿಂದ ಹೇಳಿದ್ದಾರೆ.
The post ಥಿಯೇಟರ್ ನಲ್ಲಿ ಶಿವಣ್ಣ ಗರಂ ಆಗಿದ್ದೇಕೆ..? appeared first on Valmiki Mithra.
]]>The post ರಾಜಧಾನಿಯಲ್ಲಿ ಆಟೋ ಚಾಲಕರ ಆಕ್ರೋಶ..! appeared first on Valmiki Mithra.
]]>ರಾಜಧಾನಿಯಲ್ಲಿ ರ್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಆಟೋ ಚಾಲಕರು ಬೀದಿಗೆ ಬೀಳುತ್ತಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿಗೆ ಅನುಮತಿ ಇಲ್ಲದಿದ್ದರೂ ರಾಜಾರೋಷವಾಗಿ ಸಂಚಾರ ಮಾಡುತ್ತಿದೆ. ಆರ್ಟಿಒ ಅಧಿಕಾರಿಗಳು ಬೈಕ್ ಟ್ಯಾಕ್ಸಿಗಳನ್ನು ಮಟ್ಟ ಹಾಕುವಲ್ಲಿ ವಿಫಲರಾಗಿದ್ದಾರೆ ಎಂದು ಚಾಲಕರು ಅಸಮಾಧಾನ ತೋಡಿಕೊಂಡಿದ್ದಾರೆ.
ಇ-ಬೈಕ್ ಸೇವೆ ನೀಡಲು ಅನುಮತಿ ಕೇಳಿ ಅರ್ಜಿ ಸಲ್ಲಿಸಿದ್ದು ಇದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದರಿಂದಾಗಿ ಆಟೋ ಬಳಸುವವರ ಸಂಖ್ಯೆ ಕಡಿಮೆ ಆಗಲಿದೆ. ಹೀಗಾಗಿ ಅನುಮತಿಯನ್ನು ವಾಪಸ್ ಪಡೆಯಬೇಕೆಂದು ಚಾಲಕರು ಮನವಿ ಮಾಡಿದ್ದಾರೆ.
ಆಟೋ ಚಾಲಕರ ಪ್ರತಿಭಟನಾ ಸ್ಥಳಕ್ಕಾಗಮಿಸಿದ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ, ಬೈಕ್ ಟ್ಯಾಕ್ಸಿ ರದ್ದತಿಯ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಲಾಗುವುದು. ಮುಂದೆ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರಲಿದ್ದು, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು. ಜತೆಗೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ನಾವು ಬಿಜೆಪಿ ರೀತಿ ಸುಳ್ಳು ಆಶ್ವಾಸನೆ ನೀಡುವುದಿಲ್ಲ. ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲ ಇರುತ್ತದೆ ಎಂದರು.
The post ರಾಜಧಾನಿಯಲ್ಲಿ ಆಟೋ ಚಾಲಕರ ಆಕ್ರೋಶ..! appeared first on Valmiki Mithra.
]]>The post ನ್ಯೂ ಇಯರ್ ಗೆ ಟೈಟ್ ಸೆಕ್ಯೂರಿಟಿ ಎಂದ ಪೊಲೀಸ್ ಆಯುಕ್ತರು..! appeared first on Valmiki Mithra.
]]>ಶಬ್ದಮಾಲಿನ್ಯ ನಿಯಂತ್ರಣಕ್ಕೆ ಎಸಿಪಿ ಮಟ್ಟದಲ್ಲಿ ಟೀಂ ಮಾಡಲಾಗಿದೆ. ಜನಸಂದಣಿಯ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. 4,000 ಕ್ಯಾಮರಾ ಸಿಸಿ ಟಿವಿ ಕ್ಯಾಮೆರಾ ಗಳನ್ನು ಹಾಕಲಾಗುತ್ತೆ. ಬೆಂಗಳೂರು ಎಲ್ಲಾ ಕಡೆಯೂ ಹೈಕ್ವಾಲಿಟಿ ಕ್ಯಾಮೆರಾಗಳು ಇವೆ. ಮಹಿಳೆಯರಿಗೆ ಐ ಲ್ಯಾಂಡ್ಸ್ ಗಳು ಇರುತ್ತೆ, ಟವರ್ ವಾಚ್ ಗಳು ಇರುತ್ತೆ ಎಂದು ವಿವರಿಸಿದರು.
ರಸ್ತೆಯ ಬದಿಯಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡರೆ ತಕ್ಷಣ ಪೊಲೀಸರಿಗೆ ತಿಳಿಸಿ. ಪೊಲೀಸರು ತಕ್ಷಣವೇ ಕಾರ್ಯ ಪ್ರವೃತ್ತರಾಗುತ್ತಾರೆ. ಅನುಮಾನಸ್ಪದ ವಸ್ತುಗಳ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಇದೇ ವೇಳೆ ಅವರು ವಿನಂತಿಸಿಕೊಂಡರು.
ರಾತ್ರಿ 9 ಗಂಟೆಯ ಬಳಿಕ ಇಂಟರ್ ನ್ಯಾಶನಲ್ ಏರ್ ಪೋರ್ಟ್ ಪ್ಲೈಓವರ್ ಹೊರತು ಪಡಿಸಿ ಎಲ್ಲಾ ಪ್ಲೈ ಓವರ್ ಬಂದ್ ಮಾಡಲಾಗುವುದು.
ಎಲಿವೇಟೆಡ್ ರಸ್ತೆಯಲ್ಲಿ 9 ಗಂಟೆಯ ನಂತರ ಸಂಚಾರಕ್ಕೆ ಅವಕಾಶ ಇಲ್ಲ. ರಾತ್ರಿ 9 ಗಂಟೆಯ ನಂತರ ನೈಸ್ ರೋಡ್ ದ್ವಿಚಕ್ರ ವಾಹನ ಇಲ್ಲ. ಡ್ರ್ಯಾಗ್ ರೈಸಿಂಗ್ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ. ಡ್ರಿಂಕ್ ಅಂಡ್ ಡ್ರೈವ್ ಚೆಕ್ ಮಾಡಲಾಗುತ್ತೆ ಎಂದು ತಿಳಿಸಿದರು.
The post ನ್ಯೂ ಇಯರ್ ಗೆ ಟೈಟ್ ಸೆಕ್ಯೂರಿಟಿ ಎಂದ ಪೊಲೀಸ್ ಆಯುಕ್ತರು..! appeared first on Valmiki Mithra.
]]>The post ಮಂಡ್ಯದಲ್ಲಿ ಸ್ವಾತಂತ್ರ್ಯ ಸಂಸದೆಯಾಗಿ ಸುಮಲತಾ ಅಂಬರೀಶ್ ..! ಬಿಜೆಪಿಗೆ ಸೆಳೆಯುವ ಸಾಧ್ಯತೆ appeared first on Valmiki Mithra.
]]>ಈ ಹೊತ್ತಿನಲ್ಲಿ ಕಳೆದ ರಾತ್ರಿ ಬಿಜೆಪಿಯ ಚಾಣಾಕ್ಷ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ಹಳೆ ಮೈಸೂರು ಭಾಗದಲ್ಲಿ ಪುಷ್ಠಿ ನೀಡಬೇಕಿದೆ.
ಮಂಡ್ಯದಲ್ಲಿ ಅಮಿತ್ ಶಾ ಅವರು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಮಿತ್ ಶಾ ಅವರು ಬಿಜೆಪಿಯ ಸ್ಟಾರ್ ಪ್ರಚಾರಕ. ಮಂಡ್ಯದಲ್ಲಿ ಅವರು ಭಾಷಣ ಮಾಡುವಾಗ ಬಿಜೆಪಿಯ ಸಾಧನೆಯ ರಿಪೋರ್ಟ್ ಕಾರ್ಡುಗಳನ್ನು ಜನತೆಯ ಮುಂದಿಡುವ ಸಾಧ್ಯತೆಗಳಿವೆ.
ಇಂದು ಐಟಿ ರಾಜಧಾನಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಮಿತ್ ಶಾ ಅವರು ಸಂಚರಿಸಲಿದ್ದಾರೆ. ವಿಧಾನಸಭೆ ಚುನಾವಣೆಗೆ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುವಂತೆ ಕಾರ್ಯಕರ್ತರಿಗೆ, ರಾಜ್ಯ ನಾಯಕರಿಗೆ ಉತ್ತೇಜನ ನೀಡಲಿದ್ದಾರೆ.
ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಚೆಕ್ ಮೇಟ್ ಕೊಡುವುದು ಅಮಿತ್ ಶಾ ಪ್ರವಾಸದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ. ಮಂಡ್ಯದಲ್ಲಿ ಸ್ವತಂತ್ರ ಸಂಸದೆಯಾಗಿ ಸುಮಲತಾ ಅಂಬರೀಷ್ ಕೂಡ ಇದ್ದಾರೆ. ಅವರನ್ನು ಸಹ ಬಿಜೆಪಿಗೆ ಸೆಳೆಯುವ ಸಾಧ್ಯತೆ ಹೆಚ್ಚಾಗಿದೆ.
The post ಮಂಡ್ಯದಲ್ಲಿ ಸ್ವಾತಂತ್ರ್ಯ ಸಂಸದೆಯಾಗಿ ಸುಮಲತಾ ಅಂಬರೀಶ್ ..! ಬಿಜೆಪಿಗೆ ಸೆಳೆಯುವ ಸಾಧ್ಯತೆ appeared first on Valmiki Mithra.
]]>The post ತಾಯಿಯ ಅಗಲಿಕೆಗೆ ಪ್ರಧಾನಿ ಮೋದಿ ಭಾವುಕ ಟ್ವೀಟ್ ..! appeared first on Valmiki Mithra.
]]>ತಾಯಿಯ ನಿಧನಕ್ಕೆ ಸರಣಿ ಟ್ವೀಟ್ ಮಾಡಿ ಮೋದಿಯವರು ಭಾವುಕರಾಗಿದ್ದಾರೆ. ನಮ್ಮ ತಾಯಿಯ ಜೀವನದ ಮೂರು ಹಂತ ಕಂಡಿದ್ದೇನೆ. ತಪಸ್ವೀ ಬದುಕು, ನಿಸ್ವಾರ್ಥತೆ ಪ್ರತೀಕ, ಮೌಲ್ಯಾಧಾರಿತ ಬದ್ಧತೆ ಎಂದು ಸಂತಾಪ ಸೂಚಿಸಿದ್ದಾರೆ.
ಶಾನ್ ದಾರ್ ಶತಾಬ್ದಿ ಕಾ ಈಶ್ವರ್ ಚರಣೋ ಮೇ ವಿರಾಮ್.. ತಾಯಿಯಲ್ಲಿ ಯಾವಾಗಲೂ ತ್ರಿಮೂರ್ತಿಗಳನ್ನು ನಾನು ಕಂಡಿದ್ದೇನೆ. ಅವರ ಬದುಕು ತಪೋ ಸದೃಶ, ನಿಸ್ವಾರ್ಥ ಕರ್ಮಯೋಗಿಯ ಬಾಳ್ವೆ. ಮೌಲ್ಯಗಳಿಗೆ ಬದ್ಧವಾಗಿದ್ದ ತುಂಬು ಜೀವನ..ಅವರಿಗೆ 100 ವರ್ಷ ಪೂರ್ಣವಾದಾಗ ಆಶೀರ್ವಾದ ಪಡೆಯಲು ಭೇಟಿ ನೀಡಿದ್ದೆ. ಆಗ ಅವರು ನೀಡಿದ ಹಿತ ವಚನ ನೆನಪಾಗುತ್ತಿದೆ. ಯಾವಾಗಲೂ ಬುದ್ಧಿವಂತಿಕೆಯಿಂದ ಕೆಲಸಗಳನ್ನು ಮಾಡಿ, ಪರಿಶುದ್ಧತೆಯಿಂದ ಬದುಕಿರಿ ಎಂದು ಹೇಳಿದ್ದರು ಎಂದು ಬರೆದುಕೊಂಡಿದ್ದಾರೆ.
The post ತಾಯಿಯ ಅಗಲಿಕೆಗೆ ಪ್ರಧಾನಿ ಮೋದಿ ಭಾವುಕ ಟ್ವೀಟ್ ..! appeared first on Valmiki Mithra.
]]>The post ಜಾರ್ಖಂಡ್ ನಟಿಯ ಮೇಲೆ ಅಟ್ಯಾಕ್..! appeared first on Valmiki Mithra.
]]>ನಟಿ ರಿಯಾ ಹಾಗೂ ಅವರ ಪತಿ ಪ್ರಕಾಶ್ ಕುಮಾರ್ ಅವರು ಕೋಲ್ಕತಾದಿಂದ ರಾಂಚಿಗೆ ಪ್ರಯಾಣಿಸುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದುಷ್ಕರ್ಮಿಗಳು ಅವರ ಮೇಲೆ ಅಟ್ಯಾಕ್ ಮಾಡಿದ್ದಾರೆ.ದುಷ್ಕರ್ಮಿಗಳು ಶಸ್ತ್ರಾಸ್ತ್ರಗಳೊಂದಿಗೆ ದರೋಡೆ ಮಾಡುವ ಸಂದರ್ಭದಲ್ಲಿ ರಿಯಾ ಪತಿ ಪ್ರಕಾಶ್ ಕುಮಾರ್ ಅವರು ದರೋಡೆಕೋರರನ್ನು ನೂಕಿದ್ದಾರೆ.
ಅದೇ ಸಂದರ್ಭದಲ್ಲಿ ನಟಿ ರಿಯಾ ಮೇಲೆ ಮತ್ತೊಬ್ಬ ವ್ಯಕ್ತಿ ಗನ್ ಪಾಯಿಂಟ್ ಮಾಡಿ ಗುಂಡಿಕ್ಕಿದ್ದ.ಗುಂಡಿನ ದಾಳಿಗೆ ನಟಿ ರಿಯಾ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಘಟನೆ ನಡೆದ ತಕ್ಷಣವೇ ದುಷ್ಕರ್ಮಿಗಳು ಅಲ್ಲಿಂದ ಓಡಿ ಹೋದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ನಟಿ ರಿಯಾ ಪತಿ ಪ್ರಕಾಶ್ ಕುಮಾರ್ ಹಾಗೂ ಸ್ಥಳೀಯರ ಹೇಳಿಕೆಯನ್ನು ಪಡೆದು ಮುಂದಿನ ಕ್ರಮಕೈಗೊಂಡರು.
The post ಜಾರ್ಖಂಡ್ ನಟಿಯ ಮೇಲೆ ಅಟ್ಯಾಕ್..! appeared first on Valmiki Mithra.
]]>The post ಸಮಸ್ಯೆಗಳ ಚರ್ಚೆಗೆ ರಾಜ್ಯ ಸರ್ಕಾರ ಅವಕಾಶ ನೀಡುತ್ತಿಲ್ಲ – ಶಾಸಕ ಪ್ರಿಯಾಂಕ ಖರ್ಗೆ ಅಸಮಾಧಾನ appeared first on Valmiki Mithra.
]]>ಮುಖ್ಯಮಂತ್ರಿಗಳು ದೆಹಲಿ ಪ್ರವಾಸದ ನಂತರ ಅಧಿವೇಶನವನ್ನು ಮೊಟಕುಗೊಳಿಸುವ ತೀರ್ಮಾನ ಮಾಡಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಧ್ವನಿ ಎತ್ತಲಿಲ್ಲ ಎನ್ನುವ ಆರೋಪವನ್ನು ನಿರಾಕರಿಸಿದ ಅವರು, ರೈತರ ಸಮಸ್ಯೆ ವಿಚಾರ ಅಧಿವೇಶನದ ಮೊದಲ ಪ್ರಶ್ನೆಯಾಗಿತ್ತು. ಆದರೆ, ರೈತರ ವಿಚಾರ ಮುಂದೂಡಿ, ಕುಕ್ಕರ್ ಸ್ಪೋಟ ವಿಚಾರಕ್ಕೆ ಆದ್ಯತೆ ನೀಡಲಾಯಿತು ಎಂದು ಆರೋಪಿಸಿದರು.
The post ಸಮಸ್ಯೆಗಳ ಚರ್ಚೆಗೆ ರಾಜ್ಯ ಸರ್ಕಾರ ಅವಕಾಶ ನೀಡುತ್ತಿಲ್ಲ – ಶಾಸಕ ಪ್ರಿಯಾಂಕ ಖರ್ಗೆ ಅಸಮಾಧಾನ appeared first on Valmiki Mithra.
]]>The post ಬೆಂಗಳೂರು ಪೊಲೀಸ್ ಆಯುಕ್ತರ ಸಿಟಿ ರೌಂಡ್ಸ್..! appeared first on Valmiki Mithra.
]]>ನಗರದಲ್ಲಿ ಹೊಸವರ್ಷ ಆಚರಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸೋ ದೃಷ್ಠಿಯಿಂದ, ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಇದರ ಭಾಗವಾಗಿ ಇಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು, ಸಿಟಿ ರೌಂಡ್ಸ್ ನಡೆಸಲಿದ್ದಾರೆ.
ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರೋಡ್ ಸೇರಿದಂತೆ ಹೊಸ ವರ್ಷಾಚರಣೆಗೆ ಹೆಚ್ಚು ಜನರು ಸೇರುವ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಹೊಸ ವರ್ಷ ಆಚರಣೆಗೆ ರಾತ್ರಿ 1 ಗಂಟೆಯವರೆಗೆ ಸರ್ಕಾರ ಅನುಮತಿಸಿದೆ. ಈ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಆಚರಣೆಗೆ ಅವಕಾಶ ಇಲ್ಲ ಎಂಬುದಾಗಿ ಈಗಾಗಲೇ ಸರ್ಕಾರ ಗೈಡ್ ಲೈನ್ ನಲ್ಲಿ ತಿಳಿಸಿದೆ.
ಇದರ ಜೊತೆಯಲ್ಲಿ ಹೆಚ್ಚಿದ ಕೊರೊನಾ ಆತಂಕ ಬೆನ್ನಲೇ ಜನರಿಗೆ ಎಚ್ಚರಿಕೆ ಹಾಗೂ ಜಾಗೃತಿ ಮೂಡಿಸುವ ಕೆಲಸ ನೆಡೆಸಲಾಗುತ್ತದೆ.
The post ಬೆಂಗಳೂರು ಪೊಲೀಸ್ ಆಯುಕ್ತರ ಸಿಟಿ ರೌಂಡ್ಸ್..! appeared first on Valmiki Mithra.
]]>The post ಕೊರೊನಾ ಹೊಸ ತಳಿ ಭೀತಿ ಜನರಿಗೆ ಜಾಗೃತಿ..! appeared first on Valmiki Mithra.
]]>ಬಿಎಫ್.7 ತಳಿ, ಚೀನಾದ ಗೋಡೆ ದಾಟಿ ಬರೋಬ್ಬರಿ ದಶ ದೇಶಗಳಿಗೆ ಫಸರಿಸಿಬಿಟ್ಟಿದೆ. ಅದರಲ್ಲೂ ಭಾರತದಲ್ಲಿ 6 ಮಂದಿ ದೇಹ ಹೊಕ್ಕಿ ರಣಕೇಕೆ ಹಾಕ್ತಿರೋ ಓಮಿಕ್ರಾನ್ನ ಹೊಸ ರೂಪ, ಭಯದ ಕೋಟೆಯನ್ನೇ ನಿರ್ಮಿಸಲು ದಾಪುಗಾಲಿಟ್ಟಂತೆ ಗೋಚರವಾಗತೊಡಗಿದೆ.
ರಾಜ್ಯದ ರಾಜಧಾನಿ ಬೆಂಗಳೂರಿಗೆ ಕಾಲಿಟ್ಟ 7 ಮಂದಿಗೆ ಕೊರೊನಾ ವಕ್ಕರಿಸಿದೆ. ಬಿಎಫ್.7 ತಳಿ ಭೀತಿ ಹೊತ್ತಲ್ಲೇ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಫುಲ್ ಅಲರ್ಟ್ ಮಾಡಲಾಗಿತ್ತು. ವಿದೇಶಿ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ. ಆದ್ರೆ ಕಳೆದ 24 ಗಂಟೆಯಲ್ಲೇ ಟೆಸ್ಟ್ ಮಾಡಲಾದ 119 ಪ್ರಯಾಣಿಕರಲ್ಲಿ 7 ಮಂದಿಯ ದೇಹವನ್ನ ಕೊರೊನಾ ಹೊಕ್ಕಿದೆ.
ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗುವ ಆತಂಕ ಇರೋದ್ರಿಂದ ಎಲ್ಲಾ ಜಿಲ್ಲೆಗಳಲ್ಲಿ ಆರೋಗ್ಯ ಸೌಲಭ್ಯಗಳ ಲಭ್ಯತೆ ಮಹತ್ವವಾಗಿದೆ.ರಾಜಧಾನಿ ಬೆಂಗಳೂರಿನ ವಿಕ್ಟೋರಿಯಾ ಹಾಗೂ ಸಿವಿ ರಾಮನ್ ಆಸ್ಪತ್ರೆಗಳಲ್ಲಿ ಈಗಾಗಲೇ ಆಸ್ಪತ್ರೆ ಸಿಬ್ಬಂದಿ, ವೈದ್ಯರಿಂದ ಮಾಕ್ ಡ್ರಿಲ್ಗೆ ಚಾಲನೆ ನೀಡಲಾಗಿದೆ. ಆಸ್ಪತ್ರೆಯಲ್ಲಿನ ಸಿದ್ಧತೆ ಬಗ್ಗೆ ಜಾಗೃತಿ ಹಾಗೂ ಅಣುಕು ಪ್ರದರ್ಶನ ಮಾಡಲಾಗ್ತಿದೆ.
The post ಕೊರೊನಾ ಹೊಸ ತಳಿ ಭೀತಿ ಜನರಿಗೆ ಜಾಗೃತಿ..! appeared first on Valmiki Mithra.
]]>