Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-includes/feed-rss2.php on line 8
mandya Archives - Valmiki Mithra https://valmikimithra.com/archives/tag/mandya News Paper Sat, 31 Dec 2022 06:43:27 +0000 en-US hourly 1 https://wordpress.org/?v=6.8.1 https://i0.wp.com/valmikimithra.com/wp-content/uploads/2021/07/cropped-WhatsApp-Image-2021-07-16-at-11.33.21-1.jpeg?fit=32%2C32&ssl=1 mandya Archives - Valmiki Mithra https://valmikimithra.com/archives/tag/mandya 32 32 207262515 ಅಮಿತ್ ಶಾ ಅವರು ಧೃಡ ನಿರ್ಧಾರ ಕೈಗೊಳ್ಳುವ ಗುಣದಿಂದಲೇ ಖ್ಯಾತ ರಾಗಿದ್ದಾರೆ -ಶ್ರೀ ನಿರ್ಮಲಾನಂದ ಸ್ವಾಮೀಜಿ https://valmikimithra.com/archives/6970 Sat, 31 Dec 2022 06:43:27 +0000 https://valmikimithra.com/?p=6970 ಮಂಡ್ಯ: ಮೆಗಾ ಡೈರಿ ಸ್ಥಾಪನೆ ಪುಣ್ಯದ ಕೆಲಸ ಇದರಿಂದ ರೈತ ಕುಟುಂಬಕ್ಕೆ ಶಕ್ತಿ ತುಂಬಬಹುದು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಹೇಳಿದರು. ಅವರು ಗೆಜ್ಜಲಗೆರೆಯಲ್ಲಿ 260 ಕೋಟಿ

The post ಅಮಿತ್ ಶಾ ಅವರು ಧೃಡ ನಿರ್ಧಾರ ಕೈಗೊಳ್ಳುವ ಗುಣದಿಂದಲೇ ಖ್ಯಾತ ರಾಗಿದ್ದಾರೆ -ಶ್ರೀ ನಿರ್ಮಲಾನಂದ ಸ್ವಾಮೀಜಿ appeared first on Valmiki Mithra.

]]>
ಮಂಡ್ಯ: ಮೆಗಾ ಡೈರಿ ಸ್ಥಾಪನೆ ಪುಣ್ಯದ ಕೆಲಸ ಇದರಿಂದ ರೈತ ಕುಟುಂಬಕ್ಕೆ ಶಕ್ತಿ ತುಂಬಬಹುದು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಹೇಳಿದರು.

ಅವರು ಗೆಜ್ಜಲಗೆರೆಯಲ್ಲಿ 260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೆಗಾ ಡೇರಿ ಉದ್ಘಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.

ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ರಂತೆ ಅಮಿತ್ ಶಾ ಅವರು ಧೃಡ ನಿರ್ಧಾರ ಕೈಗೊಳ್ಳುವ ಗುಣದಿಂದಲೇ ಖ್ಯಾತ ರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

The post ಅಮಿತ್ ಶಾ ಅವರು ಧೃಡ ನಿರ್ಧಾರ ಕೈಗೊಳ್ಳುವ ಗುಣದಿಂದಲೇ ಖ್ಯಾತ ರಾಗಿದ್ದಾರೆ -ಶ್ರೀ ನಿರ್ಮಲಾನಂದ ಸ್ವಾಮೀಜಿ appeared first on Valmiki Mithra.

]]>
6970
ಮಂಡ್ಯದಲ್ಲಿ ಸ್ವಾತಂತ್ರ್ಯ ಸಂಸದೆಯಾಗಿ ಸುಮಲತಾ ಅಂಬರೀಶ್ ..! ಬಿಜೆಪಿಗೆ ಸೆಳೆಯುವ ಸಾಧ್ಯತೆ https://valmikimithra.com/archives/6936 Fri, 30 Dec 2022 03:46:48 +0000 https://valmikimithra.com/?p=6936 ಬೆಂಗಳೂರು: 2023ರ ವಿಧಾನಸಭೆ ಚುನಾವಣೆಗೆ ಸಮಯ ಸನ್ನಿಹಿತವಾಗುತ್ತಿದೆ. ಚುನಾವಣೆಯ ಮೂಡ್ ಗೆ ಈಗಾಗಲೇ ಪ್ರಮುಖ ಪಕ್ಷಗಳು ಸಿದ್ಧವಾಗುತ್ತಿವೆ. ಈ ಹೊತ್ತಿನಲ್ಲಿ ಕಳೆದ ರಾತ್ರಿ ಬಿಜೆಪಿಯ ಚಾಣಾಕ್ಷ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ

The post ಮಂಡ್ಯದಲ್ಲಿ ಸ್ವಾತಂತ್ರ್ಯ ಸಂಸದೆಯಾಗಿ ಸುಮಲತಾ ಅಂಬರೀಶ್ ..! ಬಿಜೆಪಿಗೆ ಸೆಳೆಯುವ ಸಾಧ್ಯತೆ appeared first on Valmiki Mithra.

]]>
ಬೆಂಗಳೂರು: 2023ರ ವಿಧಾನಸಭೆ ಚುನಾವಣೆಗೆ ಸಮಯ ಸನ್ನಿಹಿತವಾಗುತ್ತಿದೆ. ಚುನಾವಣೆಯ ಮೂಡ್ ಗೆ ಈಗಾಗಲೇ ಪ್ರಮುಖ ಪಕ್ಷಗಳು ಸಿದ್ಧವಾಗುತ್ತಿವೆ.

ಈ ಹೊತ್ತಿನಲ್ಲಿ ಕಳೆದ ರಾತ್ರಿ ಬಿಜೆಪಿಯ ಚಾಣಾಕ್ಷ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ಹಳೆ ಮೈಸೂರು ಭಾಗದಲ್ಲಿ ಪುಷ್ಠಿ ನೀಡಬೇಕಿದೆ.

ಮಂಡ್ಯದಲ್ಲಿ ಅಮಿತ್ ಶಾ ಅವರು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಮಿತ್ ಶಾ ಅವರು ಬಿಜೆಪಿಯ ಸ್ಟಾರ್ ಪ್ರಚಾರಕ. ಮಂಡ್ಯದಲ್ಲಿ ಅವರು ಭಾಷಣ ಮಾಡುವಾಗ ಬಿಜೆಪಿಯ ಸಾಧನೆಯ ರಿಪೋರ್ಟ್ ಕಾರ್ಡುಗಳನ್ನು ಜನತೆಯ ಮುಂದಿಡುವ ಸಾಧ್ಯತೆಗಳಿವೆ.

ಇಂದು ಐಟಿ ರಾಜಧಾನಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಮಿತ್ ಶಾ ಅವರು ಸಂಚರಿಸಲಿದ್ದಾರೆ. ವಿಧಾನಸಭೆ ಚುನಾವಣೆಗೆ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುವಂತೆ ಕಾರ್ಯಕರ್ತರಿಗೆ, ರಾಜ್ಯ ನಾಯಕರಿಗೆ ಉತ್ತೇಜನ ನೀಡಲಿದ್ದಾರೆ.

ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಚೆಕ್ ಮೇಟ್ ಕೊಡುವುದು ಅಮಿತ್ ಶಾ ಪ್ರವಾಸದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ. ಮಂಡ್ಯದಲ್ಲಿ ಸ್ವತಂತ್ರ ಸಂಸದೆಯಾಗಿ ಸುಮಲತಾ ಅಂಬರೀಷ್ ಕೂಡ ಇದ್ದಾರೆ. ಅವರನ್ನು ಸಹ ಬಿಜೆಪಿಗೆ ಸೆಳೆಯುವ ಸಾಧ್ಯತೆ ಹೆಚ್ಚಾಗಿದೆ.

The post ಮಂಡ್ಯದಲ್ಲಿ ಸ್ವಾತಂತ್ರ್ಯ ಸಂಸದೆಯಾಗಿ ಸುಮಲತಾ ಅಂಬರೀಶ್ ..! ಬಿಜೆಪಿಗೆ ಸೆಳೆಯುವ ಸಾಧ್ಯತೆ appeared first on Valmiki Mithra.

]]>
6936
ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ರೈತರು ಸಿಎಂ ಅಣಕು ಶವಯಾತ್ರೆ..! https://valmikimithra.com/archives/6035 Wed, 16 Nov 2022 09:59:12 +0000 https://valmikimithra.com/?p=6035 ಮಂಡ್ಯ: ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಸಿಎಂ ಅಣಕು ಶವಯಾತ್ರೆ ಮಾಡಿದ್ದಾರೆ. ಮಂಡ್ಯದ ಸಂಜಯ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಸಿಎಂ ಅಣುಕು ಶವಯಾತ್ರೆ ನಡೆಸಿ ರೈತರು ಸರ್ಕಾರದ

The post ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ರೈತರು ಸಿಎಂ ಅಣಕು ಶವಯಾತ್ರೆ..! appeared first on Valmiki Mithra.

]]>
ಮಂಡ್ಯ: ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಸಿಎಂ ಅಣಕು ಶವಯಾತ್ರೆ ಮಾಡಿದ್ದಾರೆ.

ಮಂಡ್ಯದ ಸಂಜಯ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಸಿಎಂ ಅಣುಕು ಶವಯಾತ್ರೆ ನಡೆಸಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

ಕಬ್ಬಿನ ಬೆಲೆ ಏರಿಕೆ ಮಾಡಿ, ಹಾಲಿನ ದರ ಏರಿಕೆ ಮಾಡಿ ಎಂದು ರೈತರು 3 ದಿನದಿಂದ ಧರಣಿ ಕುಳಿತಿದ್ದಾರೆ. ಪ್ರತಿ ಟನ್ ಕಬ್ಬಿಗೆ 4,500 ರೂ, ಹಾಲಿನ ದರ ಪ್ರತಿ ಲೀ ಗೆ 40 ರೂ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಇನ್ನು ಸಿಎಂ ಶವಯಾತ್ರೆ ವೇಳೆ ಬಾಯಿ ಬಡಿದುಕೊಂಡು ರೈತರು ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಸಿಎಂ ಅಣಕು ಶವಯಾತ್ರೆ ಮಾಡದಂತೆ ರೈತರನ್ನು ಪೊಲೀಸರು ತಡೆದಿದ್ದಾರೆ. ಪೊಲೀಸರ ಮಾತಿಗೂ ಬಗ್ಗದ ರೈತರು ಸಿಎಂ ಅಣಕು ಶವಯಾತ್ರೆ ಮೆರವಣಿಗೆಯನ್ನು ಮುಂದುವರೆಸಿದ್ದಾರೆ. ನಾಲ್ಕು ಜನ ಹೆಗಲು ಕೊಟ್ಟು ಸಿಎಂ ಅಣಕು ಶವಯಾತ್ರೆ ಮಾಡುತ್ತಿದ್ದಾರೆ.

The post ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ರೈತರು ಸಿಎಂ ಅಣಕು ಶವಯಾತ್ರೆ..! appeared first on Valmiki Mithra.

]]>
6035
ಕೆಲ ಭಟ್ಟಂಗಿಗಳಿಂದ ಜೆಡಿಎಸ್ ಭದ್ರಕೋಟೆ ಕುಸಿಯುತ್ತಿದೆ – ಶಿವರಾಮೇಗೌಡ https://valmikimithra.com/archives/6032 Wed, 16 Nov 2022 09:39:30 +0000 https://valmikimithra.com/?p=6032 ಮಂಡ್ಯ: ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ. ನಾಗಮಂಗಲದಲ್ಲಿ 3 ಜನ ಪಕ್ಷೇತರರಾಗಿ ಸ್ಪರ್ಧೆ ಮಾಡೋಣ. ಸುರೇಶ್ ಗೌಡ, ಚಲುವರಾಯಸ್ವಾಮಿ ಇಬ್ಬರು ಕ್ಷೇತ್ರದಲ್ಲಿ ಪಕ್ಷಗಳ ಅಭ್ಯರ್ಥಿಗಳಾಗದೆ ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿ ಎಂದು ಶಿವರಾಮೇಗೌಡ

The post ಕೆಲ ಭಟ್ಟಂಗಿಗಳಿಂದ ಜೆಡಿಎಸ್ ಭದ್ರಕೋಟೆ ಕುಸಿಯುತ್ತಿದೆ – ಶಿವರಾಮೇಗೌಡ appeared first on Valmiki Mithra.

]]>
ಮಂಡ್ಯ: ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ. ನಾಗಮಂಗಲದಲ್ಲಿ 3 ಜನ ಪಕ್ಷೇತರರಾಗಿ ಸ್ಪರ್ಧೆ ಮಾಡೋಣ. ಸುರೇಶ್ ಗೌಡ, ಚಲುವರಾಯಸ್ವಾಮಿ ಇಬ್ಬರು ಕ್ಷೇತ್ರದಲ್ಲಿ ಪಕ್ಷಗಳ ಅಭ್ಯರ್ಥಿಗಳಾಗದೆ ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿ ಎಂದು ಶಿವರಾಮೇಗೌಡ ಸವಾಲೊಡ್ಡಿದ್ದಾರೆ. ಅವರ ವಿರುದ್ಧ ನಾನು ಗೆಲ್ಲದೆ ಹೋದರೆ ಶಿರಚ್ಛೇದನ ಮಾಡಿಕೊಳ್ಳುತ್ತೇನೆ ಎಂದು ಶಿವರಾಮೇಗೌಡ ಅವರು ಹೇಳಿದ್ದಾರೆ.

ನಾಗಮಂಗಲದಲ್ಲಿ ನಾನೇ ಲೀಡ್ ನಲ್ಲಿ ಗೆಲ್ಲುತ್ತೇನೆ. ಪಾರ್ಟಿ ಮೇಲೆ ಯಾರು ಬೇಕಾದರೂ ಗೆಲ್ಲಬಹುದು ಬನ್ನಿ ಪಕ್ಷೇತರರಾಗಿ ನಿಂತು ತೋರಿಸೋಣ. ಈ ಹಿಂದೆ ಮಂಡ್ಯ ಜಿಲ್ಲಯಲ್ಲಿ ಜೆಡಿಎಸ್ ಭದ್ರಕೋಟೆ ಆಗಿತ್ತು. ಜಿಲ್ಲೆಯ ಕೆಲ ಭಟ್ಟಂಗಿಗಳಿಂದ ಜೆಡಿಎಸ್ ಭದ್ರಕೋಟೆ ಕುಸಿಯುತ್ತಿದೆ ನನಗೆ ದೇವೇಗೌಡ್ರು, ಕುಮಾರಸ್ವಾಮಿ, ನಿಖಿಲ್ ಬಗ್ಗೆ ಗೌರವ ಇದೆ. ಅವರ ಬಗ್ಗೆ ನಾನು ಹಗರುವಾಗಿ ಮಾತನಾಡುವುದಿಲ್ಲ ಎಂದರು.

ನಾಗಮಂಗಲ ಕ್ಷೇತ್ರದಿಂದ ಸುರೇಶ್ ಗೌಡಗೆ ಜೆಡಿಎಸ್ ನಿಂದ ಟಿಕೆಟ್ ನೀಡಿದರೆ ಸೋಲು ಕಟ್ಟಿಟ್ಟ ಬುತ್ತಿ. ಜೆಡಿಎಸ್ ಪಕ್ಷ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಮಾತ್ರ ಗೆಲುವು ಖಚಿತ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರು ಎಚ್ಚರಿಕೆ ಸಂದೇಶ ನೀಡಿದರು.

The post ಕೆಲ ಭಟ್ಟಂಗಿಗಳಿಂದ ಜೆಡಿಎಸ್ ಭದ್ರಕೋಟೆ ಕುಸಿಯುತ್ತಿದೆ – ಶಿವರಾಮೇಗೌಡ appeared first on Valmiki Mithra.

]]>
6032
“5 ಕೋಟಿ ವಂಚನೆಗೆ” “5 ಕೋಟಿ ದಂಡ” ವಿಧಿಸಿದ ಕೋರ್ಟ್..! https://valmikimithra.com/archives/5707 Mon, 12 Sep 2022 15:20:09 +0000 https://valmikimithra.com/?p=5707 ಮಂಡ್ಯ: ವಿವೇಕಾನಂದ ನಗರದ ಒಳಚರಂಡಿ ಕಾಮಗಾರಿಗಾಗಿ ಮೂಡಾಗೆ ಬಂದಿದ್ದ 5 ಕೋಟಿ ರೂ. ಹಣವನ್ನು ಅಲಹಾಬಾದ್ ಬ್ಯಾಂಕ್‌ನಲ್ಲಿ ಠೇವಣಿ ಇಡಲಾಗಿತ್ತು. ಹಣವನ್ನು ತಮ್ಮ ಬ್ಯಾಂಕ್‌ನಲ್ಲಿ ಇಡುವಂತೆ ಇಂಡಿಯನ್ ಬ್ಯಾಂಕ್‌ನವರು ಮುಡಾಗೆ ಮನವಿ ಮಾಡಿ

The post “5 ಕೋಟಿ ವಂಚನೆಗೆ” “5 ಕೋಟಿ ದಂಡ” ವಿಧಿಸಿದ ಕೋರ್ಟ್..! appeared first on Valmiki Mithra.

]]>
ಮಂಡ್ಯ: ವಿವೇಕಾನಂದ ನಗರದ ಒಳಚರಂಡಿ ಕಾಮಗಾರಿಗಾಗಿ ಮೂಡಾಗೆ ಬಂದಿದ್ದ 5 ಕೋಟಿ ರೂ. ಹಣವನ್ನು ಅಲಹಾಬಾದ್ ಬ್ಯಾಂಕ್‌ನಲ್ಲಿ ಠೇವಣಿ ಇಡಲಾಗಿತ್ತು.

ಹಣವನ್ನು ತಮ್ಮ ಬ್ಯಾಂಕ್‌ನಲ್ಲಿ ಇಡುವಂತೆ ಇಂಡಿಯನ್ ಬ್ಯಾಂಕ್‌ನವರು ಮುಡಾಗೆ ಮನವಿ ಮಾಡಿ ಪತ್ರ ಬರೆದಿದ್ದರು.
ಮನವಿ ಪುರಸ್ಕರಿಸಿದ ಮೂಡಾ ಅಲಹಾಬಾದ್ ಬ್ಯಾಂಕ್‌ನಲ್ಲಿದ್ದ ಹಣವನ್ನು ಫೆಬ್ರವರಿ ತಿಂಗಳಿನಲ್ಲಿ ಇಂಡಿಯನ್ ಬ್ಯಾಂಕ್‌ಗೆ ಐದು ಚೆಕ್‌ಗಳ ಮೂಲಕ ವರ್ಗಾಯಿಸಿತ್ತು.

ಈ ಹಣಕ್ಕೆ ಇಂಡಿಯನ್ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟಂತೆ ನಕಲಿ ಬಾಂಡ್‌ಗಳನ್ನು ಸೃಷ್ಟಿಸಿದ್ದರು. ಕೆಲವು ತಿಂಗಳುಗಳ ನಂತರ ಕಾಮಗಾರಿಗಾಗಿ ಠೇವಣಿ ಹಣ ಪಡೆಯುವಂತೆ ಜಿಲ್ಲಾಧಿಕಾರಿಗಳು ಮುಡಾ ಆಯುಕ್ತರಿಗೆ ಸೂಚಿಸಿದಾಗ ಹಣ ಗೋಲ್‌ಮಾಲ್ ಆಗಿರುವ ಬಗ್ಗೆ ಶಿವರಾಮು ಬ್ಯಾಂಕ್‌ನ ಹಿಂದಿನ ಮ್ಯಾನೆಜರ್ ರಾಮಸ್ವಾಮಿ ಹಾಗೂ ಹಾಲಿ ಮ್ಯಾನೇಜರ್ ಕುಮಾರ್ ನಾಯಕ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರಕಾರ ಸಿಬಿಐ ತನಿಖೆಗೆ ಒಪ್ಪಿಸಿದು. ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿಗಳ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಐದು ಮಂದಿ ಅಪರಾಧಿಗಳಿಗೆ ತಲಾ 7 ವರ್ಷ ಜೈಲು ಶಿಕ್ಷೆ, ತಲಾ ಒಂದೊಂದು ಕೋಟಿಯಂತೆ ಐದು ಕೋಟಿ ದಂಡ ವಿಧಿಸಿ ತೀರ್ಪು ನೀಡಿದೆ..

The post “5 ಕೋಟಿ ವಂಚನೆಗೆ” “5 ಕೋಟಿ ದಂಡ” ವಿಧಿಸಿದ ಕೋರ್ಟ್..! appeared first on Valmiki Mithra.

]]>
5707
ಅಂಬರೀಶ್ ಅವರ ಕನಸು ಇದಾಗಿತ್ತು. ಎಷ್ಟೋ ವರ್ಷಗಳ ಹೋರಾಟದ ಫಲವಿದು -ಸಂಸದೆ ಸುಮಲತಾ https://valmikimithra.com/archives/5239 Thu, 11 Aug 2022 09:37:17 +0000 https://valmikimithra.com/?p=5239 ಮಂಡ್ಯ:ಮೈಶುಗರ್ ಕಾರ್ಖಾನೆ ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅವರು, ಇಂದು ಆಗುತ್ತಿರುವ ಸಂತೋಷ ಯಾವತ್ತೂ ಆಗಿಲ್ಲ. ನಾನು ಸಂಸದೆಯಾಗಿ 3 ವರ್ಷಗಳು ಕಳೆದಿವೆ. ನನ್ನ ಚುನಾವಣೆಯ ವೇಳೆಯಲ್ಲಿ ಮಂಡ್ಯದ ರೈತರಿಗೆ

The post ಅಂಬರೀಶ್ ಅವರ ಕನಸು ಇದಾಗಿತ್ತು. ಎಷ್ಟೋ ವರ್ಷಗಳ ಹೋರಾಟದ ಫಲವಿದು -ಸಂಸದೆ ಸುಮಲತಾ appeared first on Valmiki Mithra.

]]>
ಮಂಡ್ಯ:ಮೈಶುಗರ್ ಕಾರ್ಖಾನೆ ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅವರು, ಇಂದು ಆಗುತ್ತಿರುವ ಸಂತೋಷ ಯಾವತ್ತೂ ಆಗಿಲ್ಲ. ನಾನು ಸಂಸದೆಯಾಗಿ 3 ವರ್ಷಗಳು ಕಳೆದಿವೆ.

ನನ್ನ ಚುನಾವಣೆಯ ವೇಳೆಯಲ್ಲಿ ಮಂಡ್ಯದ ರೈತರಿಗೆ ಮೈಶುಗರ್ ಚಾಲನೆ ಮಾಡೇ ಮಾಡಿಸುತ್ತೇನೆಂದು ವಾಗ್ದಾನ ಕೊಟ್ಟಿದ್ದೆ. ಒಬ್ಬರ ಹೋರಾಟದ ಫಲದಿಂದ ಇದು ಆಗಿಲ್ಲ. ಸಾಕಷ್ಟು ಜನರ ಫಲದಿಂದ ಪ್ರಾರಂಭವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಅಂಬರೀಶ್ ಅವರ ಕನಸು ಇದಾಗಿತ್ತು. ಎಷ್ಟೋ ವರ್ಷಗಳ ಹೋರಾಟದ ಫಲವಿದು. ಮಂಡ್ಯ ಜಿಲ್ಲೆಯ ರೈತರಿಗೆ ಐತಿಹಾಸಿಕ ಹಾಗೂ ಸಂಭ್ರಮದ ದಿನ ಇದು. ಕೊರೊನಾ ಪ್ರವಾಹದ ನಂತರ ಸಂಭ್ರಮಿಸಲು ಇದು ಅವಕಾಶ. ಮೈಶುಗರ್ ಆರಂಭಕ್ಕೆ ಸಹಕಾರ ಕೊಟ್ಟಿರುವ ಎಲ್ಲರಿಗೂ ನನ್ನ ಧನ್ಯವಾದಗಳು ಎಂದಿದ್ದಾರೆ.

The post ಅಂಬರೀಶ್ ಅವರ ಕನಸು ಇದಾಗಿತ್ತು. ಎಷ್ಟೋ ವರ್ಷಗಳ ಹೋರಾಟದ ಫಲವಿದು -ಸಂಸದೆ ಸುಮಲತಾ appeared first on Valmiki Mithra.

]]>
5239
ಊಟಕ್ಕೆಂದು ಮನೆಗೆ ತೆರಳಿದ ಒಂಟಿ ಮಹಿಳೆಯ ಭೀಕರ ಹತ್ಯೆ..!? https://valmikimithra.com/archives/4930 Thu, 16 Jun 2022 09:47:14 +0000 https://valmikimithra.com/?p=4930 ಮಂಡ್ಯ : ಒಂಟಿ ಮಹಿಳೆಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ, ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿಯಲ್ಲಿ ನಡೆದಿದೆ, ಒಂಟಿ ಮಹಿಳೆಯ ಮನೆಗೆ ನುಗ್ಗಿರುವ ಅಪರಿಚಿತರು ಭೀಕರವಾಗಿ ಹತ್ಯೆಗೈದಿದ್ದಾರೆ. ಪುಷ್ಪಲತಾ (45) ಕೊಲೆಯಾದ ಒಂಟಿ

The post ಊಟಕ್ಕೆಂದು ಮನೆಗೆ ತೆರಳಿದ ಒಂಟಿ ಮಹಿಳೆಯ ಭೀಕರ ಹತ್ಯೆ..!? appeared first on Valmiki Mithra.

]]>
ಮಂಡ್ಯ : ಒಂಟಿ ಮಹಿಳೆಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ, ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿಯಲ್ಲಿ ನಡೆದಿದೆ, ಒಂಟಿ ಮಹಿಳೆಯ ಮನೆಗೆ ನುಗ್ಗಿರುವ ಅಪರಿಚಿತರು ಭೀಕರವಾಗಿ ಹತ್ಯೆಗೈದಿದ್ದಾರೆ.

ಪುಷ್ಪಲತಾ (45) ಕೊಲೆಯಾದ ಒಂಟಿ ಮಹಿಳೆ, ಕಳೆದ 10 ವರ್ಷದ ಹಿಂದೆ ಪತಿ ಕಾರ್ತಿಕ್ ತೀರಿ ಹೋಗಿದ್ದರು. ಆಗಿನಿಂದ ಒಂಟಿಯಾಗಿ ವಾಸ ಮಾಡಿಕೊಂಡಿದ್ದ ಮಹಿಳೆ ಜೀವನ ನಡೆಸಲು ಮೆಡಿಕಲ್ ಸ್ಟೋರ್ ನಡೆಸುತ್ತಿದ್ದರು.

ಪುಷ್ಪಲತಾ ನಿನ್ನೆ ಮಧ್ಯಾಹ್ನ ಊಟಕ್ಕೆಂದು ಮನೆಗೆ ತೆರಳಿದ್ದಾಗ ಕೊಲೆಯಾಗಿದ್ದಾರೆ, ತಾಯಿ ಎಷ್ಟು ಹೊತ್ತಾದರೂ ಮೆಡಿಕಲ್ ಸ್ಟೋರ್ ಗೆ ಬಾರದ ಹಿನ್ನೆಲೆ ಪುಷ್ಪಲತಾ ಪುತ್ರ ಮನೆಗೆ ತೆರಳಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ತಲೆಗೆ ಹಾಗೂ ಕತ್ತಿನ ಭಾಗಕ್ಕೆ ಚಾಕುವಿನಿಂದ ಇರಿದು ಹತ್ಯೆಮಾಡಿದ್ದು ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಶಂಕೆಯಿದ್ದು ಅರ್ಧಂಬರ್ಧ ಬಟ್ಟೆಯಲ್ಲಿ ಮೃತ ದೇಹ ಪತ್ತೆಯಾಗಿದ್ದು ಅತ್ಯಾಚಾರವೆಸಗಿರುವ ಬಗ್ಗೆ ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ.

ಆರೋಪಿಗಳಿಗಾಗಿ ಪೊಲೀಸರಿಂದ ಶೋಧಕಾರ್ಯ ಕಾರ್ಯ ಮುಂದುವರೆದಿದ್ದು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

The post ಊಟಕ್ಕೆಂದು ಮನೆಗೆ ತೆರಳಿದ ಒಂಟಿ ಮಹಿಳೆಯ ಭೀಕರ ಹತ್ಯೆ..!? appeared first on Valmiki Mithra.

]]>
4930
90ಕ್ಕೂ ಹೆಚ್ಚು ತೆಂಗಿನ ಮರಗಳು ನೆಲಸಮ -ರೈತ ಮಹಿಳೆ ಕಣ್ಣೀರು https://valmikimithra.com/archives/4664 Mon, 09 May 2022 05:58:59 +0000 https://valmikimithra.com/?p=4664 ಮಂಡ್ಯ:  ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಂಚನಹಳ್ಳಿಯಲ್ಲಿ ಬಿರುಗಾಳಿ ಮಳೆಗೆ ತೆಂಗಿನಮರಗಳು ಧರೆಗುರುಳಿವೆ. ಅಂಚನಹಳ್ಳಿ ಗ್ರಾಮದ ಈರಜಮ್ಮ ಎಂಬುವವರಿಗೆ ಸೇರಿದ ಜಮೀನುನಲ್ಲಿದ್ದ ಸುಮಾರು 90ಕ್ಕೂ ಹೆಚ್ಚು ತೆಂಗಿನ ಮರಗಳು ನೆಲಸಮವಾಗಿವೆ. ರೈತ

The post 90ಕ್ಕೂ ಹೆಚ್ಚು ತೆಂಗಿನ ಮರಗಳು ನೆಲಸಮ -ರೈತ ಮಹಿಳೆ ಕಣ್ಣೀರು appeared first on Valmiki Mithra.

]]>
ಮಂಡ್ಯ:  ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಂಚನಹಳ್ಳಿಯಲ್ಲಿ ಬಿರುಗಾಳಿ ಮಳೆಗೆ ತೆಂಗಿನಮರಗಳು ಧರೆಗುರುಳಿವೆ.

ಅಂಚನಹಳ್ಳಿ ಗ್ರಾಮದ ಈರಜಮ್ಮ ಎಂಬುವವರಿಗೆ ಸೇರಿದ ಜಮೀನುನಲ್ಲಿದ್ದ ಸುಮಾರು 90ಕ್ಕೂ ಹೆಚ್ಚು ತೆಂಗಿನ ಮರಗಳು ನೆಲಸಮವಾಗಿವೆ. ರೈತ ಮಹಿಳೆ ಈರಜಮ್ಮ ತೆಂಗಿನ ಮರವನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿದ್ದರು. ಇದೀಗ ನೆಲಸಮಗೊಂಡ ತೆಂಗಿನ ಮರದಿಂದ 40 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದ್ದು, ತೆಂಗಿನ ಮರ ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ.

 

The post 90ಕ್ಕೂ ಹೆಚ್ಚು ತೆಂಗಿನ ಮರಗಳು ನೆಲಸಮ -ರೈತ ಮಹಿಳೆ ಕಣ್ಣೀರು appeared first on Valmiki Mithra.

]]>
4664
ಮೇ. 15ಕ್ಕೆ ರಾಜ ವೀರ ಮದಕರಿ ನಾಯಕರ ಪುಣ್ಯಸ್ಮರಣೆ ಹಾಗೂ ಸ್ಮಾರಕ ಶಂಕುಸ್ಥಾಪನೆ https://valmikimithra.com/archives/4620 Sat, 07 May 2022 08:26:45 +0000 https://valmikimithra.com/?p=4620 ಮಂಡ್ಯ:  ಈ ಬಾರಿ ಐತಿಹಾಸಿಕವಾಗಿ ಮೇ 15ರಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಪಶ್ಚಿಮವಾಹಿನಿಯಲ್ಲಿ ರಾಜ ವೀರ ಮದಕರಿ ನಾಯಕರ ಪುಣ್ಯಸ್ಮರಣೆ ಹಾಗೂ ಸ್ಮಾರಕ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಾಡಿನ ಸಮಸ್ತ ಜನತೆ ಪುಣ್ಯ

The post ಮೇ. 15ಕ್ಕೆ ರಾಜ ವೀರ ಮದಕರಿ ನಾಯಕರ ಪುಣ್ಯಸ್ಮರಣೆ ಹಾಗೂ ಸ್ಮಾರಕ ಶಂಕುಸ್ಥಾಪನೆ appeared first on Valmiki Mithra.

]]>
ಮಂಡ್ಯ:  ಈ ಬಾರಿ ಐತಿಹಾಸಿಕವಾಗಿ ಮೇ 15ರಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಪಶ್ಚಿಮವಾಹಿನಿಯಲ್ಲಿ ರಾಜ ವೀರ ಮದಕರಿ ನಾಯಕರ ಪುಣ್ಯಸ್ಮರಣೆ ಹಾಗೂ ಸ್ಮಾರಕ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ನಾಡಿನ ಸಮಸ್ತ ಜನತೆ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂದೂ ಧರ್ಮ ಸಂರಕ್ಷಣೆಗಾಗಿ ಈ ನೆಲ ಸಂಸ್ಕೃತಿಗಾಗಿ ಹೋರಾಡಿದ ಮದಕರಿ ನಾಯಕರ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಮತ್ತು ಸರ್ಕಾರ ಮದಕರಿ ನಾಯಕರ ಥೀಮ್ ಪಾರ್ಕ್ ಮಾಡುವುದಾಗಿ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳುವುದರಿಂದ ಅವರ ಪುಣ್ಯಸ್ಮರಣ ದಿನದಂದೇ ಮದಕರಿನಾಯಕ ತಿಂ ಪಾರ್ಕಿಗೆ ಚಾಲನೆ ನೀಡಬೇಕು.

ವಾಲ್ಮೀಕಿ ಶ್ರೀಗಳು ನಡೆಸುತ್ತಿರುವ ಹೋರಾಟಕ್ಕೆ 100ನೇ ದಿನದೊಳಗೆ ಮೀಸಲಾತಿ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು.

The post ಮೇ. 15ಕ್ಕೆ ರಾಜ ವೀರ ಮದಕರಿ ನಾಯಕರ ಪುಣ್ಯಸ್ಮರಣೆ ಹಾಗೂ ಸ್ಮಾರಕ ಶಂಕುಸ್ಥಾಪನೆ appeared first on Valmiki Mithra.

]]>
4620
ಬಿಜೆಪಿ ನಾಯಕರ ದಿಢೀರ್ ಸಭೆ : ಕಮಲ ಸೇರ್ತಾರಾ ಸಂಸದೆ ಸುಮಲತಾ? https://valmikimithra.com/archives/4487 Thu, 28 Apr 2022 06:27:00 +0000 https://valmikimithra.com/?p=4487 ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಹಲವು ಮುಖಂಡರು ಶೀಘ್ರದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಬುಧವಾರ ಹೇಳಿದರು. ವಿಧಾನಸಭಾ ಚುನಾವಣೆಗೆ ಒಂದು

The post ಬಿಜೆಪಿ ನಾಯಕರ ದಿಢೀರ್ ಸಭೆ : ಕಮಲ ಸೇರ್ತಾರಾ ಸಂಸದೆ ಸುಮಲತಾ? appeared first on Valmiki Mithra.

]]>
ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಹಲವು ಮುಖಂಡರು ಶೀಘ್ರದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಬುಧವಾರ ಹೇಳಿದರು.

ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಮಂಡ್ಯ ಬಿಜೆಪಿ ಕಚೇರಿಯಲ್ಲಿ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹಾಗೂ ಸಚಿವ ನಾರಾಯಣಗೌಡ ಅಧ್ಯಕ್ಷತೆಯಲ್ಲಿ ಇಂದು ದಿಢೀರ್ ಸಭೆ ಕರೆಯಲಾಗಿದ್ದು, ಸಿ.ಪಿ.ಯೋಗೇಶ್ವರ್ ಸೇರಿದಂತೆ ಜಿಲ್ಲೆಯ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಮೇ 15 ಬಳಿಕ ಮಂಡ್ಯದಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆಯಲಿದ್ದು, ಅಂದಿನ ಸಭೆಯಲ್ಲಿ ಅನೇಕ ರಾಜಕೀಯ ಮುಖಂಡರು ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ ಬೃಹತ್ ಸಮಾವೇಶದಲ್ಲಿ ಸಂಸದೆ ಸುಮಲತಾ ಅಂಬರೀಶ್ ಕೂಡ ಬಿಜೆಪಿ ಸೇರುತ್ತಾರೆ ಎನ್ನುವ ವಿಚಾರಗಳು ಸಹ ಹರಿದಾಡುತ್ತಿದೆ.

The post ಬಿಜೆಪಿ ನಾಯಕರ ದಿಢೀರ್ ಸಭೆ : ಕಮಲ ಸೇರ್ತಾರಾ ಸಂಸದೆ ಸುಮಲತಾ? appeared first on Valmiki Mithra.

]]>
4487